May 19, 2024

Bhavana Tv

Its Your Channel

ಡಾ.ಎನ್.ಎಸ್.ಎ.ಎಮ್ ಕಾಲೇಜಿನ ವಿದ್ಯಾರ್ಥಿಗಳು ವಿಜೇತ ವಿಶೇಷ ಶಾಲೆಗೆ ಭೇಟಿ

ಕಾರ್ಕಳ : ಡಾ.ಎನ್.ಎಸ್.ಎ.ಎಮ್ ಕಾಲೇಜು ನಿಟ್ಟೆ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ಇಂದು ವಿಜೇತ ವಿಶೇಷ ಶಾಲೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಅವಶ್ಯಕವಿರುವ ದಿನಸಿ ವಸ್ತುಗಳನ್ನು ಹಸ್ತಾಂತರಿಸಿದರು . ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಮಕ್ಕಳನ್ನು ಮನರಂಜಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳು ಭರತ್ ಭಟ್, ಸಹಾಯಕ ಪ್ರಾಧ್ಯಾಪಕರು ಕು.ಅನುಷಾ, ನಿಶ್ಮಿತಾ, ಸೌಮ್ಯ, ಶ್ವೇತಾ ಆರ್, ರಶ್ಮಿ, ಮನು ಕುಮಾರಿ, ಚಿನ್ಮಯ್, ಸಚಿನ್, ಅಭಿಷೇಕ್, ನೇಮಿರಾಜ್, ವಿಜ್ಞೆಶ್, ಸಚಿತ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಂಸ್ಥೆಗೆ ಸಹಕರಿಸಿದ ತಮಗೆ ಶ್ರೀ ದೇವರು ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲೆಂದು ವಿಜೇತ ಶಾಲಾ ಮಕ್ಕಳ ಪ್ರಾರ್ಥಿಸಿದರು

ವರದಿ: ಅರುಣ ಭಟ್ ಕಾರ್ಕಳ

error: