ಕಾರ್ಕಳ:- ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯಲ್ಲಿ 15 ರಿಂದ 18 ವರ್ಷದ ವಿದ್ಯಾರ್ಥಿಗಳಿಗೆ ಸರಕಾರಿ ಆರೋಗ್ಯ ಇಲಾಖೆ ಆದೇಶದಂತೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಯಿತು ವಿದ್ಯಾಸಂಸ್ಥೆಯ ಸಂಚಾಲಕ ಎಸ್ ನಿತ್ಯಾನಂದ ಪೈ ಯವರು ದೀಪ ಬೆಳಗಿಸಿ ಎಲ್ಲರಿಗೂ ಒಳಿತಾಗಲಿ ಎಂದು ಶುಭ ಹಾರೈಸಿದರು.
ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡುವ ಸಂದರ್ಭದಲ್ಲಿ ಕಾರ್ಕಳ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಜಿ ನಾಯಕ್ ಮಕ್ಕಳನ್ನು ಭೇಟಿ ಮಾಡಿ ಆರೋಗ್ಯ ಪಾಲನೆ ಮಾಡುವಂತೆ ತಿಳಿಸಿದರು
ಈ ಸಂದರ್ಭದಲ್ಲಿ ಸರಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ವೈದ್ಯಾಧಿಕಾರಿ ಡಾ. ಮಾನಸ ಶ್ರೀರಾಮ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ವೃಂದಾ ಶೆಣೈ, ಸಂಸ್ಥೆಯ ಶಿಕ್ಷಕ ಬಂಧುಗಳು , ಆಸ್ಪತ್ರೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಮೊದಲಾದವರು ಉಪಸ್ಥಿತರಿದ್ದರು ಲಸಿಕೆ ನೀಡಿಕೆ ಯಶಸ್ವಿಯಾಗಿ ನಡೆಯಿತು.
ವರದಿ: ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.