ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಯಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಆದರ್ಶ ಗೋಖಲೆಯವರು ವಿದ್ಯಾರ್ಥಿಗಳಿಗೆ ಸುಭಾಶ್ಚಂದ್ರ ಬೋಸ್ರವರ ಬಗ್ಗೆ ದಿಕ್ಸೂಚಿ ಭಾಷಣವನ್ನು ಮಾಡಿ ಅವರ ಆದರ್ಶ ಗುಣಗಳನ್ನು ಮೆರೆಸಬೇಕೆಂಬ ಕಿವಿಮಾತು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಡಯಟ್ ಉಪಪ್ರಾಂಶುಪಾಲರಾದ ಡಾಕ್ಟರ್ ಅಶೋಕ ಕಾಮತ್ “ವಿದ್ಯಾರ್ಥಿಗಳ ಪುಸ್ತಕ ಓದಿ ಬಹುಮಾನ ಗೆಲ್ಲಿ” ಎಂಬ ಅನಿಸಿಕೆಗಳ ಪುಸ್ತಕ “ಸಂಕಲ್ಪ” ಶಿಕ್ಷಕ ಜೆ. ಸನದಿಯವರ ನೇತೃತ್ವದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ಇವರು ಶಾಲಾ ಪತ್ರಿಕೆ “ಗೋಮತಿ”ಯನ್ನು ಬಿಡುಗಡೆಗೊಳಿಸಿ ಅಭಿನಂದನೆ ಸಲ್ಲಿಸಿದರು. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿಯವರು ಇಲಾಖಾ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಕೆ. ಹರ್ಷಿಣಿ ಸ್ವಾಗತಿಸಿ, ಶೈಲಜಾ ಹೆಗ್ಡೆ ವಂದಿಸಿದರು. ವಿದ್ಯಾರ್ಥಿನಿ ಅವನಿ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.