April 29, 2024

Bhavana Tv

Its Your Channel

ಕಾರ್ಕಳ ; ನೇತಾಜಿ ಸುಭಾಶ್ಚಂದ್ರ ಬೋಸ್ ದಿನಾಚರಣೆ

ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಯಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಆದರ್ಶ ಗೋಖಲೆಯವರು ವಿದ್ಯಾರ್ಥಿಗಳಿಗೆ ಸುಭಾಶ್ಚಂದ್ರ ಬೋಸ್‌ರವರ ಬಗ್ಗೆ ದಿಕ್ಸೂಚಿ ಭಾಷಣವನ್ನು ಮಾಡಿ ಅವರ ಆದರ್ಶ ಗುಣಗಳನ್ನು ಮೆರೆಸಬೇಕೆಂಬ ಕಿವಿಮಾತು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಡಯಟ್ ಉಪಪ್ರಾಂಶುಪಾಲರಾದ ಡಾಕ್ಟರ್ ಅಶೋಕ ಕಾಮತ್ “ವಿದ್ಯಾರ್ಥಿಗಳ ಪುಸ್ತಕ ಓದಿ ಬಹುಮಾನ ಗೆಲ್ಲಿ” ಎಂಬ ಅನಿಸಿಕೆಗಳ ಪುಸ್ತಕ “ಸಂಕಲ್ಪ” ಶಿಕ್ಷಕ ಜೆ. ಸನದಿಯವರ ನೇತೃತ್ವದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ಇವರು ಶಾಲಾ ಪತ್ರಿಕೆ “ಗೋಮತಿ”ಯನ್ನು ಬಿಡುಗಡೆಗೊಳಿಸಿ ಅಭಿನಂದನೆ ಸಲ್ಲಿಸಿದರು. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿಯವರು ಇಲಾಖಾ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಕೆ. ಹರ್ಷಿಣಿ ಸ್ವಾಗತಿಸಿ, ಶೈಲಜಾ ಹೆಗ್ಡೆ ವಂದಿಸಿದರು. ವಿದ್ಯಾರ್ಥಿನಿ ಅವನಿ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು

error: