ಕಾರ್ಕಳ:ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಪ್ರಯತ್ನದಲ್ಲಿ ಯೂತ್ ರೆಡ್ ಕ್ರಾಸ್ ವಿಭಾಗ ಮತ್ತು ಕಾರ್ಕಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಅಸೋಸಿಯೇಷನ್ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜಾಗೃತಿ ಭಾಷಣ ಮತ್ತು ಅಭಿಯಾನವನ್ನು ಆಯೋಜಿಸಲು ಸರ್ಕಾರಿ ಆಸ್ಪತ್ರೆಯೊಂದಿಗೆ ಕೈಜೋಡಿಸಿತು. ಕ್ಯಾನ್ಸರ್ ರೋಗಕ್ಕೆ ಅತಿ ಹೆಚ್ಚಾಗಿ ತಂಬಾಕು ಸೇವನೆ ಮಾಡುವವರೇ ಬಲಿಯಾಗುತ್ತಿದ್ದಾರೆಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ಶಶಾಂಕ್ ಆರ್ ಕಟೀಲ್ ಹೇಳಿದರು.
ಯುವ ಜನತೆಗೋಸ್ಕರ ಇಂತಹ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು, ಕ್ಯಾನ್ಸರ್ ಮುಕ್ತ ಭಾರತವನ್ನು ನಿರ್ಮಾಣ ಮಾಡಬೇಕೆಂದು ಕಾರ್ಯಕ್ರಮವನ್ನು ಉದ್ದೇಶಿಸಿ ಕಿರಣ್ ಬಾಬು ತಮ್ಮ ಪ್ರಾಸ್ತವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜ್ ಪ್ರಾಂಶುಪಾಲರಾದ ಶ್ರೀವರ್ಮಾ ಅಜ್ರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ, ಅವರು ಕ್ಯಾನ್ಸರ್ ತಡೆಗಟ್ಟುವ ಕುರಿತು ಯುವ ಪ್ರೇಕ್ಷಕರಿಗೆ ಸಂದೇಶವನ್ನು ಇತರರಿಗೆ ತಲುಪಿಸಲು ವಿನಂತಿಸಿದರು.
ಅತಿಥಿಗಳ ತಾಂತ್ರಿಕ ಅಧಿವೇಶನದ ನಂತರ, ಕಾರ್ಕಳ ಸರ್ಕಾರಿ ಆಸ್ಪತ್ರೆಯ ಆರೋಗ್ಯ ಮಿತ್ರರಾದ ಕೀರ್ತನಾ ಅವರು ಸರಕಾರಿ ಆಸ್ಪತ್ರೆಯಲ್ಲಿನ ಉಚಿತ ಚಿಕಿತ್ಸೆಯ ಕುರಿತಾದ ಅಮೂಲ್ಯವಾದ ಮಾಹಿತಿಯನ್ನು ನೀಡಿದರು.
ವಿದ್ಯಾರ್ಥಿಗಳು ಕ್ಯಾನ್ಸರ್ ಕುರಿತು ಘೋಷಣೆಗಳನ್ನು ಕೂಗುತ್ತಾ ಜಾಗೃತಿ ಜಾಥಾ ಮತ್ತು ಆರೋಗ್ಯ ಜಾಗೃತಿ ಜಾಥಾವನ್ನು ನಡೆಸಲಾಯಿತು, ಇದರಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು
ಕಾರ್ಯಕ್ರಮದಲ್ಲಿ ಕಾಲೇಜ್ನ ವಿದ್ಯಾರ್ಥಿನಿ ವಿನುತಾ ಪೂಜಾರಿ ಪ್ರಾರ್ಥನೆ ಮಾಡಿದರು, ಕುಮಾರಿ ನಿತ್ಯ ಜೈನ ಸ್ವಾಗತಿಸಿದರು. ವಿದ್ಯಾರ್ಥಿನಿ ಧನ್ಯಶ್ರೀ ಕಾರ್ಯಕ್ರಮವನ್ನು ವಂದಿಸಿದರು, ಸೃಜನ ಕಾರ್ಯಕ್ರಮವನ್ನು ನಿರೂಪಿಸಿದರು. ಯೂತ್ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಪ್ರೊ.ದಿವ್ಯಾ ಪ್ರಭು ಪಿ, ಯುವ ಚೇತನ ರೆಂಜರ್ ಲೀಡರ್ ಪ್ರೋ ಸಂಧ್ಯಾ ಭಂಡಾರಿ, ರೋವರ್ ಲೀಡರ್ ಪ್ರೋ. ಕೃಷ್ಣಮೂರ್ತಿ ವೈದ್ಯ, ವಾಣಿಜ್ಯ ವಿಭಾಗ ಸಹಾಯಕ ಪ್ರಾಧ್ಯಾಪಕರು ಪ್ರೋ. ವಿದ್ಯಾಧರ್ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,