May 19, 2024

Bhavana Tv

Its Your Channel

ಡಾ. ವಿ.ಎಸ್ ಆಚಾರ್ಯ ಹಾಗೂ ಪುಲ್ವಾಮಾ ಹುತಾತ್ಮರ ಪುಣ್ಯಸ್ಮರಣೆ

ಕಾರ್ಕಳ : ಕರ್ನಾಟಕ ರಾಜ್ಯ ಕಂಡ ಸರಳ ಸಜ್ಜನಿಕೆಯ ರಾಜಕಾರಣಿ, ಹಿರಿಯ ಮುತ್ಸದ್ಧಿ ಧೀಮಂತ ನಾಯಕ, ಕೀರ್ತಿ ಶೇಷ ಡಾ. ವಿ.ಎಸ್ ಆಚಾರ್ಯ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶತ ನಮನಗಳನ್ನು ಅರ್ಪಿಸುವ ಪುಣ್ಯಸ್ಮರಣೆ ಕಾರ್ಯಕ್ರಮ ವಿಕಾಸ ಜನಸೇವಾ ಕಛೇರಿಯಲ್ಲಿ ನಡೆಯಿತು.
ಡಾ. ವಿ.ಎಸ್ ಆಚಾರ್ಯರವರ ಭಾವಚಿತ್ರಕ್ಕೆ ಬಿಜೆಪಿ ಮಂಡಲ ಅಧ್ಯಕ್ಷರಾದ ಮಹಾವೀರ ಹೆಗ್ಡೆ ಪುಷ್ಪ ನಮನ ಮಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್ ಕರ್ನಾಟಕದ ಅಜಾತ ಶತ್ರು ಡಾ. ವಿ.ಎಸ್ ಆಚಾರ್ಯರ ಕಾರ್ಯ ವೈಖರಿ, ದೇಶ ಭಕ್ತಿ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಮಾಡಿದ ಪ್ರಯತ್ನದ ಬಗ್ಗೆ ಸಭೆಯಲ್ಲಿ ತಿಳಿಸಿದರು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಬಗ್ಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲ್ಯಾನ್, ನಗರ ಬಿಜೆಪಿ ಅಧ್ಯಕ್ಷರಾದ ರವೀಂದ್ರ ಮೊಯಿಲಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಅನಂತಕೃಷ್ಣ ಶೆಣೈ, ಮಂಡಲ ವಕ್ತಾರ ಕೆ.ಎಸ್ ಹರೀಶ್ ಶೆಣೈ, ಮಂಡಲ ಯುವಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷೆ ಸವಿತಾ ಎಸ್. ಕೋಟ್ಯಾನ್, ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನಯ ಡಿ. ಬಂಗೇರ, ಉದಯ ಎಸ್. ಕೋಟ್ಯಾನ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: