ಕಾರ್ಕಳ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿ ಆರ್ಐಡಿಐ – 24 ಯೋಜನೆಯಡಿಯಲ್ಲಿ 96 ಲಕ್ಷದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಇಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ಆಗಿರುವ ಸುನಿಲ್ಕುಮಾರ ಅಧ್ಯಕ್ಷತೆಯಲ್ಲಿ ಬೋರ್ಡ ಕಾಲೇಜಿನ ಮೈದಾನದಲ್ಲಿ ನಡೆಯಿತು .
ಪ್ರಾರ್ಥನೆಯೊಂದಿಗೆ ಆರಂಭಗೊAಡ ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಕೆ.ಎನ್.ಹೆಗಡೆಯವರು ಸ್ವಾಗತಿಸಿದರು . ಕಾಲೇಜಿನ ಪ್ರಾಂಶುಪಾಲೆಯಾದ ಅಖಿಲಾ.ಜಿ.ಹೆಬ್ಬಾರ್ವರು ಪ್ರಾಸ್ತಾವಿಕ ನುಡಿಗಳನ್ನಾಡಿ ಸಂಸ್ಥೆಗೆ ಅಗತ್ಯವಿರುವ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಬಗ್ಗೆ ಮಾನ್ಯ ಸಚಿವರಿಗೆ ಮನವಿ ಸಲ್ಲಿಸಿದರು . ಕಂಟ್ರಾಕ್ಟರ್ ಸುರೇಶ ಕೃಷ್ಣ ಭಟ್ ಹಾಗೂ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಮಾಧವ ಭಟ್ರವರನ್ನು ಸಚಿವರು ಸನ್ಮಾನಿಸಿ ವಿದ್ಯಾಸಂಸ್ಥೆಗೆ ಶುಭಕೋರಿ ಮಾತನಾಡಿದರು . ಕಾಲೇಜು ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿಯಾದ ನಿತ್ಯಾನಂದ ಪೈ ರವರು ಮಕ್ಕಳನ್ನು ಕುರಿತು ಹಿತನುಡಿಗಳನ್ನಾಡಿದರು . ಕಾರ್ಯಕ್ರಮದ ಕೊನೆಯಲ್ಲಿ ಫ್ಯಾನಿಜೋಯ್ಸರವರು ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು . ಸಿಬಿಸಿಯ ಉಪಾಧ್ಯಕ್ಷರಾದ ವಿಜಯಶೆಟ್ಟಿ ಹಾಗೂ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು . ಸದಾನಂದರವರು ಕಾರ್ಯಕ್ರಮವನ್ನು ನಿರೂಪಿಸಿದರು .
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,