ಕಾರ್ಕಳ: ಹೆಬ್ರಿ ತಾಲೂಕಿನ ಮುನಿಯಾಲು ಕಾಡುಹೊಳೆಯ ಇತಿಹಾಸ ಪ್ರಸಿದ್ಧ ಶ್ರೀ ಜಂಗಮೇಶ್ವರ ಮಠದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಮಂಗಳವಾರದAದು ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮವು ನಡೆಯಿತು.
ದೇವಳದ ಅರ್ಚಕರಾದ ರಾಘವೇಂದ್ರ ಭಟ್ ನೇತೃತ್ವದಲ್ಲಿ ಈಶ್ವರನಿಗೆ ಕ್ಷೀರಾಭಿಷೇಕ, ಅರಸಿನಾಭಿಷೇಕ, ಸೀಯಾಳಭಿಷೇಕ ,ರುದ್ರಾಭಿಷೇಕ ಸಹಿತ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿಸಲಾಯಿತು.
ಮಹಾಶಿವರಾತ್ರಿಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಭಕ್ತಿಯಿಂದ ಪಾಲ್ಗೊಂಡಿದ್ದರು.
ಶಿವರಾತ್ರಿ ಜಾಗರಣೆ ಪ್ರಯುಕ್ತ ಸಾಯಂಕಾಲದಿAದ ಬುಧವಾರ ಮುಂಜಾನೆಯವರೆಗೆ ಕಾಡುಹೊಳೆ ಜಂಗಮೇಶ್ವರ ಭಜನಾ ಮಂಡಳಿಯ ವತಿಯಿಂದ ಭಜನಾ ಮಂಗಲೋತ್ಸವ ಕಾರ್ಯಕ್ರಮ ನಡೆಯಲಿದ್ದು, ಬುಧವಾರ ಮಧ್ಯಾಹ್ನ ಮಹಾ ಪೂಜೆಯ ಬಳಿಕ ಅನ್ನಸಂತರ್ಪಣೆಯೊAದಿಗೆ ಶಿವರಾತ್ರಿ ಆಚರಣೆ ಸಂಪನ್ನಗೊಳ್ಳಲಿದೆ
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,