ಕಾರ್ಕಳದ ಮಂಜುನಾಥ್ ಪೈ ಮೆಮೋರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮನೆರವೇರಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜೇತ ವಿಶೇಷ ಶಾಲೆಯ ಸಂಸ್ಥಾಪಕರಾದ ಡಾ.ಕಾಂತಿ ಹರೀಶ್ ಇವರು ಉಪಸ್ಥಿತರಿದ್ದು, ಯುವ ಸಮಾಜದ ವಿದ್ಯಾರ್ಥಿಗಳನ್ನುದ್ದೇಶಿಸಿ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಡಾ. ಕಾಂತಿ ಹರೀಶ್ ಅವರನ್ನು ಕಾಲೇಜು ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಮ್, ಸುಷ್ಮಾ, ಶ್ರೀಮತಿ ದಿವ್ಯ ಪ್ರಭು, ಜ್ಯೋತಿ ಎಲ್ ಜನ್ನೆ, ಜ್ಯೋತಿ, ಮೈತ್ರಿ, ವಿದ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರು ಪಾಲ್ಗೊಂಡಿದ್ದರು.
ವರದಿ:ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,