ಕಾರ್ಕಳ:ತೆಳ್ಳಾರಿನ ಮುಖ್ಯರಸ್ತೆಯಲ್ಲಿ ಪುರಸಭೆಯ ಪೈಪ್ ಲೈನ್ ಕಾಮಗಾರಿಯಿಂದ ನಿರ್ಮಾಣವಾಗಿರುವ ಹೊಂಡಗಳನ್ನು ಮುಚ್ಚುವಂತೆ ಇಂದು ತೆಳ್ಳಾರಿನ ಗ್ರಾಮಸ್ಥರು ಪುರಸಭೆಗೆ ಮನವಿಯನ್ನು ಸಲ್ಲಿಸಿದರು. ಮುಖ್ಯಾಧಿಕಾರಿಗಳ ಅನುಪಸ್ಥಿತಿಯಲ್ಲಿ ಕಿರಿಯ ಅಭಿಯಂತರರು ಮನವಿಯನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ದುರ್ಗ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ನಾಯಕ್, ಮಾಜಿ ಅಧ್ಯಕ್ಷ ದಿನೇಶ್ ನಾಯಕ್, ರಾಜೇಂದ್ರ, ಸಂತೋಷ್, ಅರ್ಜುನ್, ಆದರ್ಶ್, ವಸಂತ ನಾಯ್ಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.
ಬಿದ್ಕಲ ಕಟ್ಟೆಯ ಶ್ರೀ ನಾಗಲಕ್ಷ್ಮಿ ಸಭಾಭವನದಲ್ಲಿ ಸಹಕಾರ ಭಾರತಿ ಕುಂದಾಪುರ ತಾಲೂಕು ಅಭ್ಯಾಸ ವರ್ಗ
ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ನೀರಿಗೆ ತತ್ವಾರ ಎದುರಾಗುವ ಲಕ್ಷಣ