ಕಾರ್ಕಳ: ಕಾರ್ಕಳ ಕಾಬೆಟ್ಟು ಬಳಿಯ ಬೈಪಾಸ್ ಬಳಿ ತುಷಾರ್ ಫ್ಯೂಯೆಲ್ಸ್ ಎನ್ನುವ ನೂತನ ಪೆಟ್ರೋಲ್ ಬಂಕನ್ನು ಗಾಯತ್ರಿ ಎಕ್ಸ್ ಪೋರ್ಟ್ಸ್ ಮಾಲೀಕರಾದ ಬೋಳ ಪ್ರಭಾಕರ್ ಕಾಮತ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗತ್ತಿನ ಅಭಿವೃದ್ಧಿಯಲ್ಲಿ ಇಂಧನ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಆರ್ಥಿಕ ಚಟುವಟಿಕೆಗಳಿಗೆ ಸರಕು ಸಾಗಾಣಿಕೆಗೆ ಪೆಟ್ರೋಲ್ ಡೀಸೆಲ್ ಅಗತ್ಯವಾಗಿದೆ. ನೂತನವಾಗಿ ಶುಭಾರಂಭಗೊAಡ ಉದ್ಯಮಕ್ಕೆ ಶುಭಹಾರೈಸಿದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ ತುಷಾರ್ ಫ್ಯೂಯೆಲ್ಸ್ ನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಕೋಟ್ಯಾನ್ , ಪುರಸಭಾಧ್ಯಕ್ಷೆ ಸುಮಾ ಕೇಶವ್, ಎಚ್ ಪಿ ಪೆಟ್ರೋಲಿಯಂ ನ ಮ್ಯಾನೇಜರ್ ಅಲ್ವಿನ್ ರೋಜರ್ ಉಪಸ್ಥಿತರಿದ್ದರು.
ಸಂಸ್ಥೆಯ ಮಾಲಕರಾದ ಮನ್ಮಥ ಶೆಟ್ಟಿ ಹಾಗೂ ದೇವಿಕಾ ರವಿರಾಜ್ ರೈ ಸ್ವಾಗತಿಸಿದರು.
ವರದಿ ; ಅರುಣ ಭಟ್, ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,