ಕಾರ್ಕಳ: ಶುಕ್ರವಾರದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಇದರ ವತಿಯಿಂದ 23ನೇ ವಾರ್ಡ್ ಕಾಬೆಟ್ಟು ಕಾರ್ಕಳ ಇಲ್ಲಿನ “ಸಮುದಾಯ ಆರೋಗ್ಯ ಮತ್ತು ಕ್ಷೇಮ ಕೇಂದ್ರದ” ಉದ್ಘಾಟನಾ ಸಮಾರಂಭ ನೆರವೇರಿಸಲಾಯಿತು.
ಉದ್ಘಾಟನೆಯನ್ನು ಪುರಸಭೆಯ ಮುಖ್ಯಾಧಿಕಾರಿ ರೂಪ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ವೈದ್ಯಾಧಿಕಾರಿ ಡಾ. ಮಾನಸ ಇವರು ಉಪಸ್ಥಿತರಿದ್ದರು, ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರು ಪುರಸಭೆ ಕಾರ್ಕಳ ಪಲ್ಲವಿ , ಕಾಬೆಟ್ಟು ಪುರಸಭೆ ಸದಸ್ಯ ರೇಹಮ್ಮತ್ ಎನ್ ಶೇಕ್ , ಕಾರ್ಕಳ ಪುರಸಭೆ ಮಾಜಿ ಉಪಾಧ್ಯಕ್ಷರು ಪ್ರೇಮಾ, ಪುರಸಭೆ ಸದಸ್ಯ ಅಸ್ಫಕ್ ಅಹಮ್ಮದ್ , ಪ್ರಾರ್ಥಮಿಕ ಆರೋಗ್ಯ ಅಧಿಕಾರಿ ಪುಷ್ಪಲತಾ ಹಾಗೂ ಶುಶ್ರೂಷಕರ ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಹರಿಣಿ ಮತ್ತು ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು “ಕಾರ್ಕಳ ಸಿ” ಉಪಕೇಂದ್ರ ದ ಸಮುದಾಯ ಅಧಿಕಾರಿ ಹರಿಣಿ ಇವರು ಮಾತನಾಡಿದರು.
ವರದಿ: ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.