ಕಾರ್ಕಳ: ಪ್ರಥಮ ಪಿಯುಸಿ ಪ್ರಾರಂಭೋತ್ಸವದ ಉದ್ಘಾಟನಾ ಕಾರ್ಯಕ್ರಮವು ಇಂದು ಶ್ರೀ ಭುವನೇಂದ್ರ ಕಾಲೇಜಿನ ರಾಮಕೃಷ್ಣ ಸಭಾಂಗಣದಲ್ಲಿ ನೆರವೇರಿತು. ಯತಿವರೇಣ್ಯರ ಪುಣ್ಯಭೂಮಿಯಲ್ಲಿ ನಡೆದಾಡುವ ಸೌಭಾಗ್ಯ ಹೊಂದಿದ ನಿಮ್ಮೊಳಗಿನ ಅಧಮ್ಯಶಕ್ತಿಯ ಪ್ರವಹನ ಓದಿನತ್ತ ಇರಲಿ ಎಂದು ಕಾಲೇಜಿನ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಶ್ರೀ ಸಿಎ ಶಿವಾನಂದ ಪೈಯವರು ಅಧ್ಯಕ್ಷೀಯ ನೆಲೆಯಲ್ಲಿ ಆಶಯ ವ್ಯಕ್ತ ಪಡಿಸಿದರು.
ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್ನ ಕಾರ್ಯದರ್ಶಿಯಾದ ವರದರಾಯ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಜ್ಞಾನಾರ್ಜನೆಯಲ್ಲಿ ತಂದೆ-ತಾಯಿ, ಗುರುಗಳನ್ನು ಮೀರಿ ಭುವನೇಂದ್ರ ಕಾಲೇಜಿನ ಹೆಮ್ಮೆಯ ಹಳೆವಿದ್ಯಾರ್ಥಿಗಳೆಂದು ಗುರುತಿಸಿಕೊಳ್ಳುವ ಪ್ರಗತಿಯ ಹೆಜ್ಜೆ ಇನ್ನೊಬ್ಬರಿಗೆ ಮಾದರಿಯಾಗಬೇಕು ಎಂದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂಧರ್ಭದಲ್ಲಿ ಎಸ್.ಎಸ್.ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಕಾಲೇಜಿಗೆ ಪ್ರಥಮ ಪಿಯುಸಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಸನ್ಮಾನಿಸಲಾಯಿತು.
ಅನುಸಂಧಾನ ಮಾಡಿಕೊಳ್ಳುತ್ತ ಇದ್ದ ಮತ್ತು ಪೂರ್ವಸಿದ್ಧತೆಗಳೊಂದಿಗೆ ಸಕಾರಾತ್ಮಕ ಧೋರಣೆ ವಿದ್ಯಾರ್ಥಿ ಜೀವನದ ಗುಣ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಶ್ರೀ ಭುವನೇಂದ್ರ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್ರವರು ಅಭಿಪ್ರಾಯ ಪಟ್ಟರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ಎಸ್ ಸಿ ಯವರು ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಮೀನಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,