ಕಾರ್ಕಳ: ಸ. ಹಿ. ಪ್ರಾ. ಶಾಲೆ ಎಣ್ಣೆಹೊಳೆ ಇಲ್ಲಿ ಶಿರ್ಡಿ ಸಾಯಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಕಳ ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಹೆಚ್ ಆಶೀಷ್ ಶೆಟ್ಟಿ ಇವರು ನೋಟ್ ಪುಸ್ತಕ ಹಾಗೂ ಎಣ್ಣೆಹೊಳೆ ಹಾಲು ಉತ್ಪಾದಕರ ಸಂಘದ ವತಿಯಿಂದ ಅಂಗನವಾಡಿ ಮತ್ತು ಹಿ.ಪ್ರಾ. ಶಾಲೆಗೆ ನೀಡಿದ ಕ್ರೀಡಾ ಸಾಮಗ್ರಿ ಜೊತೆಗೆ ಸರಕಾರದ ವತಿಯಿಂದ ಉಚಿತ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಮ್ ಸಿ ಅಧ್ಯಕ್ಷೆ ಪ್ರತಿಮಾ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿಗಳಾದ ತಾಲೂಕು ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ನಾಯಕ್ ಇವರು ಪ್ರತಿ ಮಗು ಉತ್ತಮ ಶಿಕ್ಷಣ ಪಡೆದು ದೇಶದ ಪ್ರತಿಷ್ಠಿತ ಪ್ರಜೆಯಾಗಬೇಕೆಂದು ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಮರ್ಣೆ ಗ್ರಾಮ ಪಂ. ಸದಸ್ಯ ರಾಜೇಶ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಸುಂದರ ನಾಯ್ಕ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕಿ ಆಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಹಿರಿಯ ಶಿಕ್ಷಕಿ ಅರುಂಧತಿ ಧನ್ಯವಾದವಿತ್ತರು. ಭಾರತಿ ದಾನಿಗಳ ಪರಿಚಯಗೈದರು. ಸಹಶಿಕ್ಷಕಿ ಪ್ರಭಾವತಿ, ಅತಿಥಿ ಶಿಕ್ಷಕಿ ಸೌಮ್ಯ ಶೆಟ್ಟಿ ಮತ್ತು ಅಂಗನವಾಡಿ ಶಿಕ್ಷಕಿ ಕೀರ್ತಿ ಕಾರ್ಯಕ್ರಮಕ್ಕೆ ಸಹಕರಿಸಿದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,