ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ದಿನಾಂಕ: 21-06-2022ರಂದು 8ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ ಪುರಸಭೆಯ ಸದಸ್ಯರಾದ ಶ್ರೀ ಪ್ರದೀಪ್ ರಾಣೆ ವಹಿಸಿದ್ದರು. ಸಮಾರಂಭದಲ್ಲಿ ಯೋಗ ಗುರುಗಳಾದ ಅಶೋಕ್ ಕುಮಾರ್, ನಿವೃತ್ತ ಮುಖ್ಯ ಶಿಕ್ಷಕರಾದ ಮುನಿರಾಜ ರೆಂಜಾಳ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಪ್ರಕಾಶ್ ರಾವ್ ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಹರ್ಷಿಣಿ ಕೆ. ಇವರು ಉಪಸ್ಥಿತರಿದ್ದರು. ಸಮಾರಂಭದ ಮುಖ್ಯ ಅತಿಥಿಯಾದ ಮುನಿರಾಜ ರೆಂಜಾಳ ಇವರು ಯೋಗ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ನಂತರ ಸಂಸ್ಥೆಯ ವಿದ್ಯಾರ್ಥಿನಿ ರಾಷ್ಟಿçÃಯ ಯೋಗ ಪ್ರಶಸ್ತಿ ವಿಜೇತೆ ಕು. ಕವನ ಆಚಾರ್ಯ ಆಸನಗಳನ್ನು ಮಾಡುವುದರ ಮೂಲಕ ಇತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದಳು. ಕಾರ್ಯಕ್ರಮವನ್ನು ಸಮಾಜ ಶಿಕ್ಷಕಿ ಶ್ರೀಮತಿ ಪ್ರತಿಮಾ ನಾಯಕ್ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವೇದಾವತಿ ಎನ್. ಧನ್ಯವಾದಗೈದರು.
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,