ಕಾರ್ಕಳ: ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ದಾನಿಗಳು ನೀಡಿದ ರೈನ್ ಕೋಟ್ ಹಾಗೂ ಕೊಡೆಗಳ ವಿತರಣಾ ಸಮಾರಂಭ ಕಾರ್ಕಳದ ಪ್ರವಾಸಿ ಬಂಗಲೆಯಲ್ಲಿ ಗುರುವಾರ ನಡೆಯಿತು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಸಂಘದ ಸದಸ್ಯರಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಂಘದ ನೂತನ ಅಧ್ಯಕ್ಷ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ನಝೀರ್ ಪೊಲ್ಯ,ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್ ಬಿ ಜಗದೀಶ್, ಕಾರ್ಯದರ್ಶಿ ಕೃಷ್ಣ ಎಮ್ ನಾಯ್ಕ್, ಕೋಶಾಧಿಕಾರಿ ಬಾಲಕೃಷ್ಣ ಭೀಮಗುಳಿ ಉಪಸ್ಥಿತರಿದ್ದರು
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,