ಕಾರ್ಕಳ:ಕಾಂಗ್ರೆಸ್ ಪಕ್ಷ ಬ್ರಿಟಿಷರ ವಿರುದ್ಧ ತ್ಯಾಗ ಬಲಿದಾನದ ಅಹಿಂಸಾತ್ಮಕ ಹೋರಾಟ ನಡೆಸಿ ಗಳಿಸಿದ ಈ ದೇಶದ ಸ್ವಾತಂತ್ರ್ಯ ಮತ್ತು ಪ್ರಜಾತಂತ್ರ ವ್ಯವಸ್ಥೆ ಇಂದಿನ ಬಿಜೆಪಿ ಆಡಳಿತದಲ್ಲಿ ಅಪಾಯದ ಅಂಚಿನಲ್ಲಿದೆ. ದೇಶ ಸರ್ವಾಧಿಕಾರದತ್ತ ಹೊರಳುತ್ತಿದೆ. ಕಾಂಗ್ರೆಸ್ ಪಕ್ಷ ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಿದ್ಧರಾಗಬೇಕಾದ ದಿನ ಹತ್ತಿರ ಬಂದಿದೆ ಎಂದು ಮಾಜಿ ಸಚಿವ ಕೆಪಿಸಿಸಿ ಉಪಾಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭದ ಪೂರ್ವತಯಾರಿ ಕಾರ್ಯಕ್ರಮದಲ್ಲಿ ಮಾತಾಡುತ್ತಿದ್ದರು.
ರಾಜ್ಯದಲ್ಲಿರುವುದು ಪಕ್ಷಾಂತರಿಗಳ ಸರಕಾರ. ರಾಜಧರ್ಮದ ನೆಲೆಯಲ್ಲಿ ಇದೊಂದು ಅನಧಿಕೃತ ಸರಕಾರ. ಆದುದರಿಂದಲೇ ಈ ಸರಕಾರಕ್ಕೆ ಜನಪರ ಚಿಂತನೆಯ ಕಾಳಜಿ ಇಲ್ಲ. ದೇಶ ಶ್ರೀಮಂತ ಬಂಡವಾಳಶಾಹಿಗಳ ಕೈಗೆ ಹರಾಜಾಗುತ್ತಿದೆ. ಕಾಂಗ್ರೆಸ್ ಆಡಳಿತಾವಧಿಯ ರೈತಪರ, ಬಡಜನರ ಪರ ಆರ್ಥಿಕ, ಔಧ್ಯಮಿಕ, ಶೈಕ್ಷಣಿಕ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತಾಡಿ ಪಕ್ಷ ಸಂಘಟನೆ ಹಾಗೂ ಅಮೃತ ಮಹೋತ್ಸವ ಆಚರಣೆಯ ಬಗ್ಗೆ ಸೂಕ್ತ ಮಾಹಿತಿ ನೀಡಿದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಬ್ಲಾಕ್ ಅಧ್ಯಕ್ಷ ಮಂಜುನಾಥ ಪೂಜಾರಿ, ಜಿಲ್ಲಾ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ, ಕೆಪಿಸಿಸಿ ಕಿಸಾನ್ ಸಮಿತಿ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಜಿಲ್ಲಾ ಎಸ್ಟಿ ವಿಭಾಗದ ಅಧ್ಯಕ್ಷ ಸೋಮನಾಥ ನಾಯ್ಕ್, ಮಾಜಿ ಬ್ಲಾಕ್ ಅಧ್ಯಕ್ಷ ಶೇಖರ ಮಡಿವಾಳ, ವಕ್ತಾರ ಶುಭದಾ ರಾವ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಇನ್ನ, ಪ್ರಧಾನ ಕಾರ್ಯದರ್ಶಿಗಳಾದ ಪ್ರಭಾಕರ ಬಂಗೇರ , ಜೋಜ್ ðಕ್ಯಾಸ್ತಲೀನೋ, ಉಧ್ಯಮಿ ಸುರೇಂದ್ರ ಶೆಟ್ಟಿ, ನಗರಾಧ್ಯಕ್ಷ ಮಧುರಾಜ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿ'ಸೋಜ, ಮಾಜಿ ಪುರಸಭಾಧ್ಯಕ್ಷ ಸುಭೀತ್ ಕುಮಾರ್ ಹಾಗೂ ಹಾಲಿ ಮಾಜಿ ಪುರಸಭಅ ಸದಸ್ಯರು, ಘಟಕಗಳ ಅದ್ಯಕ್ಷರು ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,