ಕಾರ್ಕಳ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶನಿವಾರ ಮಂಗಳೂರು ಎಸ್ಡಿಎಂ ಕಾಲೇಜಿನಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್- ಘಟಕ ಚರ್ಚಾ ಸ್ಪರ್ಧೆಯಲ್ಲಿ ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಪದವಿ ಕಾಲೇಜಿನ ದ್ವಿತೀಯ ಬಿ. ಕಾಂ ವಿದ್ಯಾರ್ಥಿನಿಯರಾದ ಮಿಯ್ಯಾರು ಗ್ರಾಮದ ಶ್ರೀನಿಧಿ ನಾಯಕ್ ಮತ್ತು ಬೆಳುವಾಯಿಯ ಶ್ರೇಯಾ ಜೈನ್ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆ ಮೂಲಕ ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ವರದಿ ; ಅರುಣ ಭಟ್, ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.