ಕಾರ್ಕಳ:- 75 ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಜಾರ್ಜ್ ಕ್ಯಾಸ್ತಲಿನೋ ನಕ್ರೆ ಇವರು ಧ್ವಜಾರೋಹಣಗೈದು, ಶುಭಾ ಹಾರೈಸಿದರು.
ಕಾಂಗ್ರೆಸ್ ಮುಖಂಡರು, ಖ್ಯಾತ ನ್ಯಾಯವಾದಿಯು ಆದ ಎಚ್. ಶೇಖರ್ ಮಡಿವಾಳ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾತ್ಮ ಗಾಂಧೀಜಿ, ಜವಾಹರ್ ಲಾಲ್ ನೆಹರೂ, ಸರ್ದಾರ ವಲ್ಲಭಬಾಯಿ ಪಟೇಲ್, ಸುಭಾಶ್ಚಂದ್ರ ಬೋಸ್, ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿ, ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಭಾಕರ ಬಂಗೇರಾ, ದಯಾನಂದ ಶೆಟ್ಟಿ, ನಗರಾಧ್ಯಕ್ಷರಾದ ಮಧುರಾಜ್ ಶೆಟ್ಟಿ, ಕಾಂತಿ ಶೆಟ್ಟಿ, ಹಾಗೂ ಶೋಭಾ, ಉಷಾ ಕೆ. ಸುನಿಲ್ ಭಂಡಾರಿ, ಅಭಿನಂದನ್ ಮಡಿವಾಳ್, ಗುರುಪ್ರಸಾದ್, ರೋನ್ಡಾಲ್, ಇನಾಸ್, ಸದಾನಂದ, ಕೃಷ್ಣ ಮೊದಲಾದವರು ಉಪಸ್ಥಿತರಿದ್ದರು
ವರದಿ: ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.