April 29, 2024

Bhavana Tv

Its Your Channel

ವಿಜೇತ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮ

ಕಾರ್ಕಳ: ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ ಇವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿಜೇತ ಶಾಲಾ ಆಡಳಿತ ಮಂಡಳಿ ವತಿಯಿಂದ ಇಂಪ್ರೆಸ್ ಡ್ಯಾನ್ಸ್ ಕ್ರಿವ್ ಕಾರ್ಕಳ ನೃತ್ಯ ಗುರುಗಳು ಸುಕೇಶ್ ಶೆಟ್ಟಿ ಹಾಗೂ ವಿಜೇತ ವಿಶೇಷ ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರರಿಗೆ ಗೌರವ ವಂದನೆ ಸಮರ್ಪಿಸಲಾಯಿತು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಾನಸ ಪಾಂಬುರು ವಿಶೇಷ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ ನೃತ್ಯ ತಂಡಕ್ಕೆ ವಿಜಯದ ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಪ್ರಥಮ ದರ್ಜೆ ಕಾರ್ಯದರ್ಶಿ ಹರೀಶ್, ಮ್ಯಾನೇಜಿಂಗ್ ಟ್ರಸ್ಟಿ ಹರೀಶ್ ಕೋಟ್ಯಾನ್ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಶಿಕ್ಷಕರು ಮತ್ತು ಶಿಕ್ಷಕೇತರು ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: