ಕಾರ್ಕಳದಲ್ಲಿ ನಿರ್ಮಿಸಲಾದ ಕುಡಿಯುವ ಶುದ್ಧ ನೀರಿನ ಘಟಕ ಪ್ರಾರಂಭವಾಗಿ ಒಂದೇ ತಿಂಗಳಲ್ಲಿ ಕೆಟ್ಟು ನಿಂತಿದೆ, ಸಂಬAಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳು ಗಮನಹರಿಸಿ ಎಂದು ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಕರೆ ನೀಡಿದ್ದಾರೆ
ಕಾರ್ಕಳ ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಮಾನ್ಯ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗೆ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ವ್ಯವಸ್ಥೆಯನ್ನು ಮಾಡಿರುತ್ತಾರೆ, ಆದರೆ ಇದನ್ನ ಅಳವಡಿಸಿದ ಒಂದು ತಿಂಗಳ ಒಳಗೆ ಕೆಟ್ಟು ಹೋಗಿ ಇದು ಯಾರಿಗೂ ಬೇಡವಾದ ಘಟಕವಾಗಿದೆ. ಈ ನಿಟ್ಟಿನಲ್ಲಿ ನಾವು ಹಲವಾರು ಬಾರಿ ಪುರಸಭೆಗೆ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದರು ನಮಗೂ ಈ ಸಮಸ್ಯೆಗೂ ಯಾವುದೇ ಸಂಬAಧವಿಲ್ಲ ಎಂಬAತೆ ವರ್ತಿಸುತ್ತಿದ್ದಾರೆ ಇನ್ನು ಮುಂದಿನ ದಿನಗಳಲ್ಲಿ ಇದನ್ನು ದುರಸ್ತಿ ಮಾಡದಿದ್ದಲ್ಲಿ ಇದರ ಬಗ್ಗೆ ಪ್ರತಿಭಟನೆಯನ್ನು ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮಾಧ್ಯಮಕ್ಕೆ ತಿಳಿಸಿದರು.
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,