May 15, 2024

Bhavana Tv

Its Your Channel

ಆಯುಷ್ಮಾನ್ ಅಭಾ ಕಾರ್ಡ್ ನೋಂದಣಿ ಶಿಬಿರ

ಕಾರ್ಕಳ ಪುರಸಭಾ ವ್ಯಾಪ್ತಿಯ ಉಚ್ಚಂಗಿ ನಗರದಲ್ಲಿ ಯೂತ್ ಫಾರ್ ಸೇವಾ ಮತ್ತು ಸ್ಥಳೀಯ ಸದಸ್ಯರ ಆಶ್ರಯದಲ್ಲಿ ನಡೆದ ಅಯುಷ್ಮಾನ್ ಅಭಾ ಕಾರ್ಡ್ ನೋಂದಣಿ ಶಿಬಿರವನ್ನು ಪುರಸಭಾ ಸದಸ್ಯರಾದ ಶುಭದರಾವ್ ದೀಪ ಬೇಳಗಿಸಿ ಉದ್ಘಾಟಿಸಿದರು,

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರ ನೀಡುವ ಸವಲತ್ತುಗಳನ್ನು ಜನರಿಗೆ ತಲುಪಿಸುವುದು ಜನಪ್ರತಿನಿಧಿಗಳಾದ ನಮ್ಮ ಕರ್ತವ್ಯ ಹಾಗಾಗಿ ಈ ಶಿಬಿರವನ್ನು ಆಯೋಜಿಸಲಾಗಿದೆ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಯೂತ್ ಫಾರ್ ಸೇವಾದ ರಮಿತಾ ಶೈಲೇಂದ್ರ ಪ್ರಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯೆ ಪ್ರತಿಮಾ ರಾಣೆ, ದಿಲೀಪ್ ವೇದಿಕೆಯಲ್ಲಿ ಆಶಾ ಕಾರ್ಯಕರ್ತೆ ವೇದಾವತಿ ಉಪಸ್ಥಿತರಿದ್ದರು

ವರದಿ: ಅರುಣ ಭಟ್ ಕಾರ್ಕಳ

error: