
ಕಾರ್ಕಳ: ಸುರತ್ಕಲ್ ಟೋಲ್ ಬಡ ಜನರ ಹಗಲು ದರೋಡೆ ಮಾಡುತ್ತಿದೆ ಈ ಟೋಲ್ ಅನಧಿಕೃತ ಎಂದು ಸರಕಾರವೇ ಒಪ್ಪಿಕೊಂಡಿದ್ದರೂ ಇನ್ನೂ ತೆರವು ಮಾಡದಿರುವುದು ನಾಡಿನ ಜನರಿಗೆ ಮಾಡಿದ ದ್ರೋಹ, ಕಾರ್ಕಳದ ಜನರೂ ಇದರ ಸಂತ್ರಸ್ತರಾಗಿದ್ದಾರೆ ಆದ್ದರಿಂದ ಅಕ್ರಮವಾಗಿ ಸುಲಿಗೆ ಮಾಡುತ್ತಿರುವ ಸುರತ್ಕಲ್ ಟೋಲ್ ಕೂಡಲೇ ಬಂದ್ ಆಗಬೇಕು ಟೋಲ್ ನ ವಿರುದ್ಧವಾಗಿ ನಡೆಯುವ ಯಾವುದೇ ಹೋರಾಟಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕೆ.ಪಿ.ಸಿ.ಸಿ ಸದಸ್ಯ ಸುರೇಂದ್ರ ಶೆಟ್ಟಿ ಹೇಳಿದರು ಅವರು ಇಂದು ಸುರತ್ಕಲ್ ಟೋಲ್ ವಿರುದ್ಧವಾಗಿ ನಡೆಯುತ್ತಿರವ ಹಗಲು- ರಾತ್ರಿ ಧರಣಿಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಪುರಸಭಾ ಸದಸ್ಯ ಹಾಗೂ ಕಾಂಗ್ರೆಸ್ ವಕ್ತರಾರಾದ ಶುಭದ ರಾವ್ ಮಾತನಾಡಿ ಸಂಸದ ನಳಿನ್ ಕುಮಾರ್ ಕಟೀಲ್ ನೀಡಿರುವ ಗಡುವು ನಾಳೆಗೆ ಮುಕ್ತಾಯವಾಗಲಿದೆ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೀಡಿರುವ ಗಡುವು ನವೆಂಬರ್ ಅಂತ್ಯಕ್ಕೆ ಮುಕ್ತಾಯವಾಗುತ್ತದೆ ಈ ಅವಧಿಯಲ್ಲೂ ಟೋಲ್ ತೆರವು ಸಾಧ್ಯವಾಗದಿದ್ದರೆ ಇಬ್ಬರ ಮಾತಿಗೆ ಬೆಲೆ ಇಲ್ಲದಂತಾಗುವುದಿಲ್ಲವೇ ಆಗ ಸಾರ್ವಜನಿಕರಿಗೆ ಯಾವ ಮುಖವನ್ನು ತೋರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಕಾಂಗ್ರೇಸ್ ಮಹಿಳಾ ನಾಯಕಿ ಲಾವಣ್ಯ ಬಲ್ಲಾಳ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಮಾಳ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ಹೆಗ್ಡೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ ನಗರ ಮಹಿಳಾ ಅಧ್ಯಕ್ಷೆ ಕಾಂತಿ ಶೆಟ್ಟಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುಹಾಸ್ ಕಾವ, ಸುನೀಲ್ ಭಂಡಾರಿ , ಪ್ರಥ್ವಿರಾಜ್, ರಮಾಕಾಂತ್ ಶೆಟ್ಟಿ, ನಿಶಾನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು
ವರದಿ: ಅರುಣ ಭಟ್ ಕಾರ್ಕಳ

More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ