April 26, 2024

Bhavana Tv

Its Your Channel

ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ಗೆ ಅತ್ಯುತ್ತಮ ಸಂಸ್ಥೆ ರಾಜ್ಯ ಪ್ರಶಸ್ತಿ.

ಕಾರ್ಕಳ:- ಡಿಸೆಂಬರ್ 3 ವಿಶ್ವ ವಿಕಲ ಚೇತನರ ದಿನಾಚರಣೆ 2022 ಬೆಂಗಳೂರು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ (ರಿ). ವಿಜೇತ ವಿಶೇಷ ಶಾಲೆಗೆ ಅತ್ಯುತ್ತಮ ಸಂಸ್ಥೆ ಎಂದು ಗೌರವಿಸಿ ರಾಜ್ಯ ಪ್ರಶಸ್ತಿಯನ್ನು ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಇವರಿಂದ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಇವರು ಸ್ವೀಕರಿಸಿದರು.

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಲತಾ ಕುಮಾರಿ , ಡಾ.ಎನ್ ಮಂಜುಳಾ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಇನ್ನಿತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: