May 6, 2024

Bhavana Tv

Its Your Channel

ನಲ್ಲೂರು ಪಾಜಿಗುಡ್ಡೆ ಟರ್ನ್ ಬಳಿ ಪ್ರವಾಸದ ಬಸ್ಸೊಂದು ನಿಯಂತ್ರಣ ತಪ್ಪಿ, ಉರುಳಿ ಬಿದ್ದ ಘಟನೆ ಸಂಭವಿಸಿದೆ.

ಕಾರ್ಕಳ: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಶ್ರೀ ಬಸವೇಶ್ವರ ಪ್ರೌಢಶಾಲೆ ರಾಂಪುರ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳುತ್ತಿದ್ದ ಸಮಯದಲ್ಲಿ ಕಾರ್ಕಳದ ನಲ್ಲೂರು ಪಾಜಿ ಗುಡ್ಡೆಯ ಟರ್ನ್ ಬಳಿ ಹನ್ನೊಂದು ಗಂಟೆಯ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ 7 ರಿಂದ 8 ಮಂದಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

error: