April 27, 2024

Bhavana Tv

Its Your Channel

ವಿಜೇತ ವಿಶೇಷ ಶಾಲೆಯಲ್ಲಿ 74ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಕಾರ್ಕಳ ; 74ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣವನ್ನು ಉದ್ಯಮಿ ಹಾಗೂ ಬಿಜೆಪಿ ತಾಲೂಕು ಅಧ್ಯಕ್ಷರು ಮಹಾವೀರ ಜೈನ್ ಇವರು ನೆರವೇರಿಸಿದರು. ಹಾಗೂ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ರೈಸ್ ಮಿಲ್ ನ ಮಾಲಕರಾದ ಮಂಜುನಾಥ್ ಪೂಜಾರಿ , ಶಾಲಾ ಹಿತೈಷಿಗಳಾದ ಸುಕೇಶ್ ಶೆಟ್ಟಿ ಎಣ್ಣೆಹೊಳೆ, ಶಾಲಾ ಅಧ್ಯಕ್ಷರು & ಎ.ಪಿ.ಯಂ.ಸಿ ಅಧ್ಯಕ್ಷರಾದ ಶ್ರೀ ರತ್ನಾಕರ್ ಅಮೀನ್, ಟ್ರಸ್ಟಿ ಶ್ರೀ ಸಿಯಾ ಸಂತೋಷ್ ನಾಯಕ್, ಸಂಸ್ಥಾಪಕಿ ಡಾ. ಕಾಂತಿ ಹರೀಶ್, ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಸಿಬ್ಬಂದಿ ವರ್ಗದವರು ಹಾಗೂ ವಿಜೇತ ಶಾಲಾ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ವಿಶೇಷ ಶಿಕ್ಷಕಿ ಕು.ಶ್ರುತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಡಾ. ಕಾಂತಿ ಹರೀಶ್ ಸ್ವಾಗತಿಸಿ,ಪ್ರಾಸ್ತಾವಿಕ ಮಾತುಗಳನಾಡಿದರು ವಿಶೇಷ ಶಿಕ್ಷಕಿ ಕು.ಶಿಲ್ಪಾ ವಂದಿಸಿದರು.
ವರದಿ ; ಅರುಣ ಭಟ್, ಕಾರ್ಕಳ

error: