April 29, 2024

Bhavana Tv

Its Your Channel

ನಿಟ್ಟೆ ಅತ್ತೂರು ಮರಿ ಪರಪುಪಾದೆ ವ್ಯಾಘ್ರ ಚಾಮುಂಡಿ ದೈವದ ನೇಮೋತ್ಸವ.

ಕಾರ್ಕಳ: ನಿಟ್ಟೆ ಅತ್ತೂರು ಮರಿ ಪರಪು ಪಾದೆ ವ್ಯಾಘ್ರ ಚಾಮುಂಡಿ ದೈವದ ನೇಮೋತ್ಸವ ಗುರುವಾರ ರಾತ್ರಿ ವಿಜೃಂಭಣೆಯಿoದ ನಡೆಯಿತು. ಬೆಳಿಗ್ಗೆ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ, ನಂತರ ಮಹಾಪೂಜೆ ಶ್ರೀ ಸತ್ಯನಾರಾಯಣ ಪೂಜೆ,ಮಹಾ ಅನ್ನಸಂತರ್ಪಣೆ ಭಜನಾ ಕಾರ್ಯಕ್ರಮ ನೆರವೇರಿತು. ಅರ್ಚಕ ವಾಸುದೇವ ಭಟ್ ಅತ್ತೂರು, ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು,ಗುತ್ತು ಬರ್ಕೆ ಗುರಿಕಾರರು ಮತ್ತು ಊರ ಪರವೂರ ಹತ್ತು ಸಮಸ್ತರು ,ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಪ್ರಮೋದ್ ಮುತಾಲಿಕ್ ದೈವಸ್ಥಾನಕ್ಕೆ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು

ವರದಿ: ಅರುಣ ಭಟ್ ಕಾರ್ಕಳ

error: