April 29, 2024

Bhavana Tv

Its Your Channel

ಕಾರ್ಕಳದಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಬೃಹತ್ ಬೈಕ್ ರ‍್ಯಾಲಿ

ಕಾರ್ಕಳ :-ಸೋಮವಾರ ಮಧ್ಯಾಹ್ನ ಅನಂತಶಯನ ವೃತ್ತದಿಂದ ಅಜೇಕರ್ ವರೆಗೆ ಬಿಜೆಪಿಯ ವಿಜಯ ಸಂಕಲ್ಪ ಬೃಹತ್ ಬೈಕ್ ರಾಲಿ ಜರುಗಿತು. ಐತಿಹಾಸಿಕ ಬೈಕ್ ರ‍್ಯಾಲಿ ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಷಾಮಲೈ ಕೆ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುಮಾಕೇಶವ ಪುಷ್ಪಗುಚ್ಚ ಸಮ್ಮರ್ಪಿಸಿ ಬೈಕ್ ರ‍್ಯಾಲಿ ಗೆ ಚಾಲನೆ ನೀಡಿದರು. ಸಚಿವರಾದ ಸುನಿಲ್ ಕುಮಾರ್ ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಸುಮಾರು 2000 ಬೈಕ್‌ಗಳು ಈ ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದವು.ರ‍್ಯಾಲಿ ನಂತರ ಮಾಜಿ ಐಪಿಎಸ್ ಅಧಿಕಾರಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಷಾಮಲೈ ಕೆ. ಅವರು ಕಾರ್ಕಳ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಗೆ ಭೇಟಿ ನೀಡಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ರವಿಪ್ರಕಾಶ್ ಪ್ರಭು ಅವರು ಅಣ್ಣಾಮಲೈ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಕಿರಣ ರವಿಪ್ರಕಾಶ್ ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: