May 7, 2024

Bhavana Tv

Its Your Channel

ಕಲಾ ಸಿಂಚನ ಮಕ್ಕಳ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಬೇಸಿಗೆ ಶಿಬಿರ.

ಕಾರ್ಕಳ ; ಸ.ಹಿ.ಪ್ರಾ.ಶಾಲೆ ಕಾರ್ಕಳ ಮೈನ್ ಇಲ್ಲಿ 6 ರಿಂದ 13 ವರ್ಷ ವಯೋಮಿತಿಯ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆಯಾದ ಶ್ರೀಮತಿ ಶೋಭಾ ಅವರು ವಹಿಸಿ ಶುಭ ಹಾರೈಸಿದರು. ಶಾಲಾ ಹಿತೈಷಿ ಹಾಗೂ ಪೋಷಕರಾದ ಶ್ರೀ ವಿನಯ್ ಉಪಸ್ಥಿತರಿದ್ದು ಶಿಬಿರಕ್ಕೆ ಶುಭ ಹಾರೈಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಶಿಬಿರ ಅತ್ಯಂತ ಮಹತ್ವಪೂರ್ಣವಾದುದು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಇಂತಹ ಅವಕಾಶ ಇಲ್ಲಿ ದೊರೆತಿರುವುದು ಸಂತೋಷದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು. ಶಿಬಿರದ ನಿರ್ದೇಶಕರಾದ ಚಂದ್ರನಾಥ ಬಜಗೋಳಿಯವರು ಶಿಬಿರದ ರೂಪುರೇಷೆ ಬಗ್ಗೆ ಮಾಹಿತಿ ನೀಡಿ, ಶಿಬಿರದ ದಿನದ ಚಟುವಟಿಕೆ ಪ್ರಾರಂಭಿಸಿದರು..
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಾಲಾಭಿಮಾನಿಗಳು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪ್ರತಿಮಾ ಎಸ್, ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಶಾಲಾ ಹಿತೈಷಿ ಹಾಗೂ ಶಿಕ್ಷಕರಾದ ಶ್ರೀ ದೇವದಾಸ್ ಕೆರೆಮನೆ ನಿರೂಪಿಸಿ ವಂದಿಸಿದರು.

ವರದಿ : ಅರುಣ ಭಟ್ ಕಾರ್ಕಳ

error: