April 26, 2024

Bhavana Tv

Its Your Channel

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಗರಿಷ್ಠ ಸಾಧನೆಗೆ ಡಿ.ಡಿ.ಪಿ.ಐ ಈಶ್ವರ ನಾಯ್ಕ ಅಭಿಮಾನದ ಅಭಿನಂದನೆ ಸಲ್ಲಿಸಿದ್ದಾರೆ.

ಕಾರವಾರ ; ಜಿಲ್ಲೆಯ ಸುತ್ತಲಿನ ಜಿಲ್ಲೆಗಳಿಗಿಂತ ನಮ್ಮ ಉತ್ತರ ಕನ್ನಡ ಜಿಲ್ಲೆಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶ ದಾಖಲೆಯಾಗಿರುವುದು ಹೆಮ್ಮೆಯ ವಿಷಯ. ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ಫಲಿತಾಂಶ ಶೇಕಡ 90.53% ದೊಂದಿಗೆ ಹಿಂದಿನ ವರ್ಷದ 17ನೇ ಸ್ಥಾನದಿಂದ 13ನೇ ಸ್ಥಾನಕ್ಕೆ ಉತ್ತಮಪಡಿಸಿಕೊಂಡಿದೆ. ಹಿಂದಿನ ವರ್ಷ 89% ರಷ್ಟಿದ್ದ ಫಲಿತಾಂಶ ಈ ವರ್ಷ 90.53% ರಷ್ಟಾಗುವುದರೊಂದಿಗೆ ಶೇಕಡ 1.53 % ಹೆಚ್ಚು ಫಲಿತಾಂಶ ಪಡೆದಿರುತ್ತದೆ.
ನಮ್ಮ ಉತ್ತರ ಕನ್ನಡ ಜಿಲ್ಲೆಯಲ್ಲಿ 197 ಪ್ರೌಢಶಾಲೆಗಳಿದ್ದು 52 ಪ್ರೌಢಶಾಲೆಗಳು ಶೇಕಡ 100%ರಷ್ಟು ಫಲಿತಾಂಶ ಪಡೆದಿದ್ದು ಅದರಲ್ಲಿ 17 ಸರ್ಕಾರಿ ಪ್ರೌಢಶಾಲೆ 13 ಅನುದಾನಿತ ಪ್ರೌಢಶಾಲೆಗಳು ಹಾಗೂ 22 ಅನುದಾನ ರಹಿತ ಪ್ರೌಢಶಾಲೆಗಳು ಶೇಕಡಾ 100ರಷ್ಟು ಫಲಿತಾಂಶ ಪಡೆದಿರುತ್ತವೆ. ಉತ್ತರ ಕನ್ನಡ ಜಿಲ್ಲೆಯ 27 ವಿದ್ಯಾರ್ಥಿಗಳು ರಾಜ್ಯದ 4 ರಿಂದ 10 ನೇ ರ‍್ಯಾಂಕ್ ಗಳಲ್ಲಿ ಸ್ಥಾನ ಪಡೆದಿರುತ್ತಾರೆ.
ಜಿಲ್ಲೆಯ 1 ರಿಂದ 10ನೇ ರ‍್ಯಾಂಕ್ ಗಳಲ್ಲಿ 46 ವಿದ್ಯಾರ್ಥಿಗಳು ಸ್ಥಾನ ಪಡೆದಿರುತ್ತಾರೆ.
ಈ ಗರಿಷ್ಠ ಗುಣಾತ್ಮಕ ಸಾಧನೆಗೆ ಉತ್ತಮ ಬೋಧನೆ ಮತ್ತು ಮಾರ್ಗದರ್ಶನ ನೀಡಿ ಈ ಸಾಧನೆಗೆ ಕಾರಣೀಭೂತರಾದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಯ ಮುಖ್ಯಾಧ್ಯಾಪಕರುಗಳಿಗೆ ಹಾಗೂ ಸಹ ಶಿಕ್ಷಕರುಗಳಿಗೆ ಹಾಗೂ ಎಸ್.ಎಸ್. ಎಲ್. ಸಿ ಪರೀಕ್ಷೆಯ ಕಾರ್ಯ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಿರ್ವಹಿಸಿದ್ದ ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ, ಡಯಟ್ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ, ಜಿಲ್ಲಾ ನೋಡಲ್ ಅಧಿಕಾರಿಗಳಿಗೆ, ತಾಲೂಕಿನ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಕಚೇರಿಯ ಸಿಬ್ಬಂದಿಗಳಿಗೆ, ಹಾಗೂ ತಾಲೂಕಿನ ಎಲ್ಲ ನೋಡಲ್ ಅಧಿಕಾರಿಗಳಿಗೆ, ಹಾಗೂ ಮಕ್ಕಳ ಸಾಧನೆಗೆ ಉತ್ತಮ ಪ್ರೋತ್ಸಾಹ ನೀಡಿದ ಜಿಲ್ಲೆಯ ಎಲ್ಲಾ ಪಾಲಕರಿಗೆ, ಎಸ್.ಡಿ.ಎಂ.ಸಿ ಹಾಗೂ ಆಡಳಿತ ಮಂಡಳಿಯವರಿಗೆ, ಉತ್ತಮ ಶೈಕ್ಷಣಿಕ ಸಾಧನೆಗೆ ಕಾರಣೀಭೂತರಾದ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕರ ಸಂಘಗಳಿಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ.
ಅಲ್ಲದೇ ಎಸ್.ಎಸ್.ಎಲ್.ಸಿ ಯಲ್ಲಿ ಗರಿಷ್ಠ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳ ಮುಂದಿನ ಉಜ್ವಲ ಭವಿಷ್ಯಕ್ಕೆ ಈಶ್ವರ್ ನಾಯ್ಕ ಉಪ ನಿರ್ದೇಶಕರು ( ಡಿ.ಡಿ.ಪಿ.ಐ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉತ್ತರ ಕನ್ನಡ ಜಿಲ್ಲೆ. ಕಾರವಾರ ಇವರು ಶುಭ ಹಾರೈಸಿದ್ದಾರೆ.

error: