ಕಾರ್ಕಳ ; ಪುರಸಭಾ ವ್ಯಾಪ್ತಿಗೆ ಬರುವ ಈ ರಸ್ತೆ ಗಾಂಧಿ ಮೈದಾನ ಹಾಗೂ ಕಾರ್ಕಳ ಪೇಟೆಯನ್ನು ಸಂಪರ್ಕಿಸುವ ಕೂಡುರಸ್ತೆಯಾಗಿದೆ. ಚರಂಡಿಯಿಲ್ಲದೆ ಮಳೆ ನೀರು ರಸ್ತೆ ಮಧ್ಯೆಯೇ ಹರಿದು ಕೆಸರುಮಯವಾಗಿದೆ. ಸಂಚಾರಕ್ಕೆ ಯೋಗ್ಯವಲ್ಲದ ಈ ರಸ್ತೆಯ ದು:ಸ್ಥಿತಿಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆಯುದ್ದಕ್ಕೂ ಹೊಂಡಗಳಲ್ಲಿ ತುಂಬಿದ ಮಳೆ ನೀರಿನಿಂದ ವಾಹನ ಸಂಚಾರಕ್ಕೆ ತ್ರಾಸದಾಯಕ ಮಾತ್ರವಲ್ಲದೆ ಪಾದಚಾರಿಗಳ ಓಡಾಟಕ್ಕೂ ಕಷ್ಟಕರವಾಗಿದೆ.
ಇದರಲ್ಲಿ ಪ್ರತಿನಿತ್ಯ ಶಾಲಾ ವಾಹನ ಮತ್ತು ವೆಂಕಟರಮಣ ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳ ವಾಹನ ಹಾಗೂ ಸ್ಥಳೀಯರ ವಾಹನ ಸಂಚಾರವಿರುತ್ತದೆ. ಆದರೆ ಅವ್ಯಸ್ಥಿತ ರಸ್ತೆಯಿಂದಾಗಿ ಇಲ್ಲಿ ಸಂಚರಿಲು ಅನಾನುಕೂಲವಾಗಿದೆ.
ಚರಂಡಿ ನಿರ್ಮಾಣ ಮತ್ತು ರಸ್ತೆ ದುರಸ್ತಿ ಬಗ್ಗೆ ಕಳೆದ 6 ತಿಂಗಳಿ0ದ ಪುರಸಭೆಯವರಿಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪ್ರತಿಕ್ರಿಯೆ ದೊರೆತಿಲ್ಲ. ಪರಿಣಾಮವಾಗಿ ಮಳೆಗಾಲ ಆರಂಭವಾಗುತ್ತಿದ್ದAತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಮಳೆ ನೀರಿನಿಂದ ರಸ್ತೆ ಕೆಸರುಮಯವಾಗಿದ್ದರಿಂದ ಮತ್ತು ಗುಂಡಿಗಳಲ್ಲೇ ನೀರು ತುಂಬಿದ್ದರಿ0ದ ಪಾದಚಾರಿಗಳೂ ಓಡಾಡಲು ಪರದಾಡುವಂತಾಗಿದೆ. ಇನ್ನಾದರೂ ಈ ಕುರಿತು ತಕ್ಷಣವೇ ಸಂಬ0ಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿದ್ದಾರೆ.
ವರದಿ ; ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,