September 6, 2024

Bhavana Tv

Its Your Channel

ಕಾರ್ಕಳ ಜೆಡಿಎಸ್ ಪಕ್ಷದ ವತಿಯಿಂದ ರಾಜ್ಯ ಸರಕಾರಕ್ಕೆ ಗಮನಕ್ಕೆ ತರುವಂತೆ ಮನವಿ ಸಲ್ಲಿಸಲಾಯಿತು

ಕಾರ್ಕಳ : ನಮ್ಮ ಜೀವನದಿಯಾದ ಕಾವೇರಿ ನದಿಯ ನೀರನ್ನು ಪಕ್ಕದ ತಮಿಳುನಾಡು ರಾಜ್ಯಕ್ಕೆ ಬಿಡದಂತೆ ಕಾರ್ಕಳ ಜೆಡಿಎಸ್ ಪಕ್ಷದ ವತಿಯಿಂದ ಮಾನ್ಯ ಕಾರ್ಕಳ ಮತ್ತು ಹೆಬ್ರಿ ತಾಲೂಕು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ರಾಜ್ಯ ಸರಕಾರಕ್ಕೆ ಗಮನಕ್ಕೆ ತರುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಕಾಂತ್ ಕುಚ್ಚೂರು, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಪ್ರವೀಣ್ ಚಂದ್ರ ಜೈನ್, ಕಾರ್ಕಳ ಪ್ರಧಾನ ಕಾರ್ಯದರ್ಶಿಯಾದ ಸುರೇಶ್ ದೇವಾಡಿಗ ಬಜೆಗೋಳಿ, ಸಂಘಟನೆ ಕಾರ್ಯದರ್ಶಿ ಸೈಯದ್ ಹರ್ಷದ್, ಕೀರ್ತಿರಾಜ್, ಅನುಪ್ ಉಪಸ್ಥಿತರಿದ್ದರು.
ವರದಿ ; ಅರುಣ ಭಟ್ ಕಾರ್ಕಳ

error: