ಭಟ್ಕಳ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಭಟ್ಕಳ ತಾಲೂಕು ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ, ಕೋವಿಡ್ ರೋಗಿಗಳಿಗೆ, ಪುರಸಭೆ ಪೌರಕಾರ್ಮಿಕರಿಗೆ ಒಂದು ದಿನದ ಊಟವನ್ನು ಬುಧವಾರ ವಿತರಣೆ ಮಾಡಲಾಯಿತು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ ಮಾತನಾಡಿ, ಎಐಸಿಸಿ ಹಾಗೂ ಕೆಪಿಸಿಸಿ ಕೋವಿಡ್ ಸಂದರ್ಭದಲ್ಲಿ ಸೋಂಕಿಗೆ ತುತ್ತಾಗಿರುವವರಿಗೆ ನೆರವಾಗುವ ನಿಟ್ಟಿನಲ್ಲಿ ಆಕ್ಸಿಜನ್, ಪಿಪಿಇ ಕಿಟ್,ಔಷಧಗಳ ಪೂರೈಕೆ, ಆಹಾರ ಕಿಟ್ಗಳ ವಿತರಣೆ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಹಾಗೂ ೧೪ ಬ್ಲಾಕ್ಗಳ ಅಡಿಯಲ್ಲಿ ಒಂದು ದಿನದ ಊಟ ವಿತರಣೆ ಮಾಡಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ, ಭಿಕ್ಷುಕರಿಗೆ ನಿರ್ಗತಿಕರಿಗೂ ಸಹ ಊಟವನ್ನು ವಿತರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ಮಜೀದ್ ಶೇಖ್ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಕೈಸರ್ ಮೊತೇಶಮ್,ಪುರಸಭಾ ಸದಸ್ಯ ರವೂಫ ನಾಯಿತೇ, ಸಲೀಮ್, ಇರ್ಷಾದ, ನರಸಿಂಹ ನಾಯ್ಕ ಮುಂಡಳ್ಳಿ, ಮುಂತಾದವರು ಉಪಸ್ಥಿತರಿದ್ದರು.
ವರದಿ ; ಮಂಜು ಮುಟ್ಟಳ್ಳಿ, ಭಟ್ಕಳ
More Stories
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ
ಮುಂಡಗೋಡ ತಾಲೂಕಿನಲ್ಲಿ ನಡೆದ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನ