May 8, 2024

Bhavana Tv

Its Your Channel

ಮುಂಡಗೋಡ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರಕ್ಕೆ ಚಾಲನೆ

ಮುಂಡಗೋಡ : ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಇವರುಗಳು ಸಹಯೋಗದಲ್ಲಿ ಅಳವಡಿಸಲಾದ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊoಡ ಡಯಾಲಿಸಿಸ್ ಯಂತ್ರವನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಂತರ ಆಸ್ಪತ್ರೆಯ ಆವರಣದಲ್ಲಿ ನೂತನ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕರಾದ ಹರಿಪ್ರಕಾಶ ಕೋಣೆಮನೆ, ಕೆ.ವಿ.ಜಿ.ವಿ ಚೇರ್ಮನ್ ಪಿ.ಗೋಪಿಕೃಷ್ಣ, ಸುಧೀರ ಕುಲ್ಕರ್ಣಿ ಮಾಸ್ಟರ್ ಟ್ರೈನರ್ ಬಿ.ವಿ.ಟಿ ಮಣಿಪಾಲ, ಸೆಲ್ಕೋ ಸಿ.ಇ.ಒಮೋಹನ ಹೆಗಡೆ, ಪ.ಪಂಚಾಯತ ಅಧ್ಯಕ್ಷರಾದ ರೇಣುಕಾ ರವಿ ಹಾವೇರಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿ ಗೌಡ ಪಾಟೀಲ, ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಪ್ರಮುಖರಾದ ಉಮೇಶ ಬಿಜಾಪುರ, ಗುಡ್ಡಪ್ಪಾ ಕಾತೂರ, ಕೆ.ಸಿ.ಗಲಬಿ ಹಾಗೂ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ :- ವೇಣುಗೋಪಾಲ ಮದ್ಗುಣಿ

error: