May 18, 2024

Bhavana Tv

Its Your Channel

ಗಣರಾಜ್ಯೋತ್ಸವ ಪರೇಡ್ ಗೆ ನಾರಾಯಣಗುರುಗಳ ಸ್ತಬ್ದಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲು ಕೇಂದ್ರಕ್ಕೆ ಸಿಪಿಐ(ಎಂ) ಉಕ ಜಿಲ್ಲಾ ಸಮಿತಿ ಒತ್ತಾಯ

ಗಣರಾಜ್ಯೋತ್ಸವದ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದನ್ನು ಸಿಪಿಐಎಂ ಉತ್ತರ ಕನ್ನಡ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.

ಶತಮಾನಗಳ ಹಿಂದೆಯೇ ಅಸ್ಪ್ರಶ್ಯತೆ ಮತ್ತಿತರ ಅನ್ಯಾಯಗಳ ವಿರುದ್ದ ಹಿಂದೂ ಧರ್ಮದ ಸುಧಾರಣೆಗಾಗಿ ತೊಡಗಿಸಿಕೊಂಡಿದ್ದ ಸಮಾಜ ಸುಧಾರಕ ನಾರಾಯಣ ಗುರುಗಳನ್ನು ಅಪಮಾನಿಸುವ ಕೇಂದ್ರ ಸರ್ಕಾರದ ಈ ನಡೆ ಅತ್ಯಂತ ಖಂಡನೀಯ ಮತ್ತು ರಾಜಕೀಯ ದ್ವೇಷದಿಂದ ಕೂಡಿದೆ.

ಕೇಂದ್ರ ಸರ್ಕಾರದ ಇಡೀ ಆಡಳಿತ ವೈಖರಿಯಲ್ಲಿ ಆರ್ ಎಸ್ ಎಸ್ ತೀವ್ರ ಬಲಪಂಥೀಯ ಚಿಂತನೆಗಳು ಮೇಲುಗೈ ಸಾಧಿಸಿರುವುದರ ಪರಿಣಾಮ. ಕೇಂದ್ರ ಸರಕಾರವು ತಕ್ಷಣ ಈಗ ಆಗಿರುವ ಪ್ರಮಾದವನ್ನು ಸರಿಪಡಿಸಿ ಕೇರಳ ಸರಕಾರ ಯೋಜಿಸಿದ ಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನೀಡಬೇಕೆಂದು ಸಿಪಿಐ(ಎಂ) ಉತ್ತರ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಎಂದು ಯಮುನಾ ಗಾಂವ್ಕರ್ ಕಾರ್ಯದರ್ಶಿ, ಸಿಪಿಐ(ಎಂ) ಉತ್ತರ ಕನ್ನಡ ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: