May 17, 2024

Bhavana Tv

Its Your Channel

ಬ್ರಹ್ಮಶ್ರೀ ನಾರಾಯಣಗುರು ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಮುಂಡಗೋಡ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಅಂಗವಾಗಿ ತಾಲೂಕಿನ ನ್ಯಾಸರ್ಗಿಯ ಬ್ರಹ್ಮಶ್ರೀ ನಾರಾಯಣಗುರು ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.


ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ, ಎಲ್.ಟಿ.ಪಾಟೀಲ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಜಯಸುಧಾ ಭೋವಿ ಹಾಗೂ ನಾರಾಯಣಗುರು ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು

error: