May 4, 2024

Bhavana Tv

Its Your Channel

ವಿದ್ಯುತ್ ಗ್ರೀಡ್ ಅನ್ನು ಮೇಲ್ದರ್ಜೆಗೆರಿಸುವ ಕಾಮಗಾರಿಗೆ ಭೂಮಿ ಪೂಜೆ ನೆರೆವೇರಿಸಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಮುಂಡಗೋಡ, ಅ 08 : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪಟ್ಟಣ ವಿದ್ಯುತ್ ಉಪಕೇಂದ್ರದ ಆವರಣದಲ್ಲಿ 110 / 11 ಕೆ.ವಿ ಸಾಮರ್ಥ್ಯ ವಿದ್ಯುತ್ ಗ್ರೀಡ್ ಅನ್ನು ಮೇಲ್ದರ್ಜೆಗೆರಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ, ಎಲ್.ಟಿ.ಪಾಟೀಲ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಜಯಸುಧಾ ಬೋವಿ, ಉಪಾಧ್ಯಕ್ಷರಾದ ಶ್ರೀಕಾಂತ ಸಾನು, ಪ್ರಮುಖರಾದ ಉಮೇಶ್ ಬಿಜಾಪುರ, ಗುಡ್ಡಪ್ಪ ಕಾತೂರ, ಕೆ.ಸಿ.ಗಲಬಿ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಅಧಿಕಾರಿಗಳು ಉಪಸ್ಥಿತರಿದ್ದರು

error: