March 16, 2024

Bhavana Tv

Its Your Channel

ಉತ್ತರ ಕನ್ನಡ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಅಂಕೋಲಾದ ಶಾಂತರಾಮ ನಾಯಕ ಆಯ್ಕೆ.

ಉತ್ತರಕನ್ನಡ:– ಡಿಸೆಂಬರ್ 17ಮತ್ತು 18, 2022 ರಂದು ಉಳವಿಯಲ್ಲಿ ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಅಂಕೋಲಾದ ಶಾಂತರಾಮ ನಾಯಕ, ಹಿಚಕಡ ಅವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ಎನ್. ವಾಸರೆ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ದಾಂಡೇಲಿಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಅಂತಿಮವಾಗಿ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಸೇವೆ ಮಾಡುತ್ತಿದ್ದವರಿಗೆ ಮೊದಲ ಆದ್ಯತೆಯನ್ನು ನೀಡಿ, ಅವರ ಸಾಹಿತ್ಯ ಕೃಷಿ, ವಯಸ್ಸು, ಹಾಗೂ ಅವರ ಒಟ್ಟಾರೆ ಸಾಧನೆಗಳನ್ನು ಪರಿಗಣಿಸಿ ಉಪಸ್ಥಿರಿದ್ದ ಎಲ್ಲ ತಾಲೂಕು ಅಧ್ಯಕ್ಷರುಗಳು ಹಾಗೂ ಜಿಲ್ಲಾ ಸಮಿತಿಯ ಸದಸ್ಯರು ಸರ್ವಾನುಮತದಿಂದ ಶಾಂತಾರಾಮ ನಾಯಕ, ಹಿಚಕಡ ಅವರ ಹೆಸರನ್ನು ಆಯ್ಕೆ ಮಾಡಿದರೆಂದು ಬಿ.ಎನ್. ವಾಸರೆ ತಿಳಿಸಿದ್ದಾರೆ.

error: