ಹೊನ್ನಾವರ ; ಸೌದಿ ಅರೆಬಿಯಾದ ಜಿದ್ದಾದಿಂದ ಮಂಗಳೂರಿಗೆ ಬಂದಿಳಿದ ಹೊನ್ನಾವರ ತಾಲೂಕಿನ ಮಂಕಿ ಪಟ್ಟಣದ ೩೬ ವರ್ಷದ ವ್ಯಕ್ತಿಯೊಬ್ಬರು ಅನಾರೋಗ್ಯಪೀಡಿತರಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರಯವ ಘಟನೆ ಶನಿವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಜರಗಿದೆ.
ಮೂಲಗಳ ಪ್ರಕಾರ, ಮೊಹಮ್ಮದ್ ತೌಫಿಕ್ ಖಾಜಿ ಕಳೆದ ೧೫ ವರ್ಷಗಳಿಂದ ಸೌದಿ ಅರೇಬಿಯಾದ ಜಿದ್ದಾ ಎಂಬಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ ೧ ರಂದು ಬೆಳಿಗ್ಗೆ ೧೧.೩೦ ರ ಸುಮಾರಿಗೆ ಜಿದ್ದಾದಿಂದ ಮಂಗಳೂರಿಗೆ ವಿಮಾನದ ಮೂಲಕ ಬಂದಿಳಿದ ಇವರು ಅಸ್ವಸ್ಥರಾದರು. ಅವರ ಸ್ಥಿತಿ ತುಂಬಾ ಹದಗೆಟ್ಟಿರುವುದರನ್ನು ಅರಿತು ನೇರವಾಗಿ ವಿಮಾನ ನಿಲ್ದಾಣದಿಂದ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ.
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ