ಶಿರಸಿ: ನಗರದ ಕಸ್ತೂರಬಾ ನಗರದ ಜಹಾಂಗೀರ ಸಾಬ್ ಎಂಬುವವರ ಮೇಲೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಪ್ರದೇಶದ ಇಬ್ಬರಿಗೆ ಒಂದು ವರ್ಷ ನಾಲ್ಕು ತಿಂಗಳು ಜೈಲು ಶಿಕ್ಷೆ ಹಾಗೂ ತಲಾ ₹ 7,500 ದಂಡ ವಿಧಿಸಿ ಇಲ್ಲಿನ ಒಂದನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶಿಸಿದೆ.
ಇಮ್ತಿಯಾಜ್ ಅಬ್ದುಲ್ ಖಾದರ ಮತ್ತು ಅಲ್ತಾಫ್ ಅಬ್ದುಲ್ ಖಾದರ ಶಿಕ್ಷೆಗೆ ಗುರಿಯಾದವರು. ಇವರಿಬ್ಬರೂ 2016ರ ಮೇ 29 ರಂದು ಜಹಾಂಗೀರ ಮೇಲೆ ಹಲ್ಲೆ ನಡೆಸಿದ್ದಾಗಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಉಪನಿರೀಕ್ಷಕರು ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಶಂಕರ ರೆಡ್ಡಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕಿ ಸೋಫಿಯಾ ಶಹಬುದ್ದೀನ್ ಸಾಬ್ ಇನಾಮದಾರ ವಾದ ಮಂಡಿಸಿದ್ದರು.
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ