May 19, 2024

Bhavana Tv

Its Your Channel

ಡಾ. ಸವಿತಾ ಕಾಮತ ಅವರನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ತಾಲೂಕಾ ವೈದ್ಯಾಧಿಕಾರಿಗಳಾಗಿ ನೇಮಿಸಿ ಭಟ್ಕಳ ಉಪವಿಭಾಗಾಧಿಕಾರಿ ಭರತ್ ಎಸ್ ಆದೇಶ ನೀಡಿದ್ದಾರೆ.

ಭಟ್ಕಳ : ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿರುವ ಡಾ. ಸವಿತಾ ಕಾಮತ ಅವರನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ತಾಲೂಕಾ ವೈದ್ಯಾಧಿಕಾರಿಗಳಾಗಿ ನೇಮಿಸಿ ಭಟ್ಕಳ ಉಪವಿಭಾಗಾಧಿಕಾರಿ ಭರತ್ ಎಸ್ ಆದೇಶ ನೀಡಿದ್ದಾರೆ.ಭಟ್ಕಳ ತಾಲೂಕಿನಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕಿತ ವ್ಯಕ್ತಿಗಳ ಸಂಪರ್ಕ, ಪತ್ತೆ ಹಚ್ಚುವಿಕೆ ಮುಂತಾದ ಕಾರ್ಯಗಳಲ್ಲಿ ಪ್ರಗತಿ ಕುಂಠಿತವಾಗಿದೆ. ಹೀಗೆ ಆದಲ್ಲಿ ಭಟ್ಕಳದಲ್ಲಿ ಕೋವಿಡ್ ನಿಯಂತ್ರಣ ಕಷ್ಟ ಸಾದ್ಯ ಎಂದು ಜಿಲ್ಲಾಧಿಕಾರಿ ಡಾ ಹರೀಶ ಕುಮಾರ ಕೆ. ನಡೆಸಿದ ವಿಡಿಯೋ ಸಂದರ್ಶನದಲ್ಲಿ ಸೂಚನೆ ನೀಡಿದ್ದರು. ಜಿಲಾಧಿಕಾರಿಗಳ ನಿರ್ದೇಶನದಂತೆ ಡಾ. ಸವಿತಾ ಕಾಮತ ಅವರನ್ನು ಸೆ.5ರಿಂದ ಜಾರಿಗೆ ಬರುವಂತೆ ತಾಲೂಕಾ ವೈದ್ಯಾಧಿಕಾರಿಗಳನ್ನಾಗಿ ನೇಮಿಸಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ತಾಲೂಕಾ ವೈದ್ಯಾಧಿಕಾರಿಯಾಗಿರುವ ಡಾ. ಮೂರ್ತಿರಾಜ ಅವರನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸಿ ಮುಂದಿನ ಆದೇಶ ಬರುವ ವರೆಗೆ ಡಾ. ಸವಿತಾ ಕಾಮತ ಅವರನ್ನು ತಾಲೂಕಾ ವೈದ್ಯಾಧಿಕಾರಿಗಳಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ

error: