ಭಟ್ಕಳ ; ನಟರಾಜ ದೇವಪ್ಪ ಖಾರ್ವಿ (೨೯) ಎನ್ನುವವನೇ ಆತ್ಮಹತ್ಯೆಗೆ ಶರಣಾದವನಾಗಿದ್ದಾನೆ. ಸೋಮವಾರ ಮೀನುಗಾರಿಕೆಗೆ ತೆರಳಿದ್ದ ಈತ ಸಂಜೆ ೫ ಗಂಟೆಯ ಸುಮಾರಿಗೆ ಮನೆಗೆ ಬಂದು ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು ಮನೆಯವರು ಕರೆದರೂ ಕೂಡಾ ಮಾತನಾಡದೇ ಇರುವುದರಿಂದ ಸಂಶಯಗೊAಡು ಬಾಗಿಲು ಒಡೆದು ನೋಡುವಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈತನು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.ಪೊಲೀಸರು ಆತನ ಸಹೋದರ ಉದಯ ದೇವಪ್ಪ ಖಾರ್ವಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.