May 15, 2024

Bhavana Tv

Its Your Channel

ಭಟ್ಕಳ ಬಂದರ ಮಾವಿನಕುರ್ವೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಭಟ್ಕಳ ; ನಟರಾಜ ದೇವಪ್ಪ ಖಾರ್ವಿ (೨೯) ಎನ್ನುವವನೇ ಆತ್ಮಹತ್ಯೆಗೆ ಶರಣಾದವನಾಗಿದ್ದಾನೆ. ಸೋಮವಾರ ಮೀನುಗಾರಿಕೆಗೆ ತೆರಳಿದ್ದ ಈತ ಸಂಜೆ ೫ ಗಂಟೆಯ ಸುಮಾರಿಗೆ ಮನೆಗೆ ಬಂದು ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು ಮನೆಯವರು ಕರೆದರೂ ಕೂಡಾ ಮಾತನಾಡದೇ ಇರುವುದರಿಂದ ಸಂಶಯಗೊAಡು ಬಾಗಿಲು ಒಡೆದು ನೋಡುವಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈತನು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.ಪೊಲೀಸರು ಆತನ ಸಹೋದರ ಉದಯ ದೇವಪ್ಪ ಖಾರ್ವಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

error: