May 15, 2024

Bhavana Tv

Its Your Channel

ಭಟ್ಕಳ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಭಟ್ಕಳ: ನಗರದ ಆಸರಕೇರಿಯಲ್ಲಿರುವ ನಾಮಧಾರಿ ಸಮಾಜದ ಗುರುಮಠ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ಬೆಳಿಗ್ಗೆ ೭ ಗಂಟೆಗೆ ವಿಶೇಷ ಪೂಜೆ ಪರಸ್ಕಾರ ನಡೆಯಿತು.

ಶ್ರೀ ದೇವರ ಉತ್ಸವ ಮೂರ್ತಿಯನ್ನು ದಕ್ಷಿಣ ದ್ವಾರದಲ್ಲಿ ಅಲಂಕರಿಸಿ ಪಲ್ಲಕ್ಕಿಯಲ್ಲಿರಿಸಿ ಪೂಜಿಸಲಾಯಿತು. ಭಕ್ತಾಧಿಗಳು ವಿಶೇಷವಾಗಿ ದೇವಸ್ಥಾನದ ದೇವಾಲಯದ ದಕ್ಷಿಣ ದ್ವಾರದ ಮೂಲಕ ಪ್ರವೇಶಿಸಿ ಶ್ರೀ ದೇವರ ದರ್ಶನ ಪಡೆದು ಶ್ರೀ ದೇವರ ಪಲ್ಲಕ್ಕಿಯಡಿಯಲ್ಲಿ ಉತ್ತರ ದ್ವಾರದ ಮೂಲಕ ಹೊರಬಂದು ವಿಶೇಷ ಆಚರಣೆ ನಡೆಸಿದರು. ಈ ಸಂದರ್ಭದಲ್ಲಿ ಸಮಾಜದ ಕುಲಗುರುಗಳಾದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳು ದೇವರ ದರ್ಶನ ಪಡೆದರು. ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಶ್ರೀ ಸರತಿಯ ಸಾಲಿನಲ್ಲಿ ಬಂದು ಶ್ರೀ ವೇಂಕಟೇಶ್ವರನಿಗೆ ವಿಶೇಷ ಪೂಜೆ ನಡೆಸಿದರು.
ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೃಷ್ಣ ನಾಯ್ಕ, ಉಪಧ್ಯಕ್ಷ ಭವಾನಿಶಂಕರ ನಾಯ್ಕ, ಕಾರ್ಯದರ್ಶಿ ಮಾಸ್ತಿ ನಾಯ್ಕ, ಸದಸ್ಯರಾದ ಗೋವಿಂದ ನಾಯ್ಕ, ಶ್ರೀಧರ ನಾಯ್ಕ, ಶಿವರಾಮ ನಾಯ್ಕ, ಗಿರೀಶ ನಾಯ್ಕ,ಸುರೇಶ ನಾಯ್ಕ, ನಾರಾಯಣ ನಾಯ್ಕ, ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲು ಸಹಕರಿಸಿದರು.

error: