ಹೊನ್ನಾವರ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶಿಕ್ಷಕ ಸ್ನೇಹಿ ಸಂಘವಾಗಿ ಕಾರ್ಯ ನಿರ್ವಹಿಸುವದರ ಜೊತೆಗೆ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ , ಹೊನ್ನಾವರ ತಾಲೂಕು ಅತ್ಯಂತ ಪ್ರತಿಭಾವಂತ ಶಿಕ್ಷಕರಿರುವ ತಾಲೂಕು. ಈ ಸಲ ಒಂದು ಉತ್ತಮ ಸಂಘಟನೆಗೆ ಬೆಂಬಲಿಸಿ ಸಂಘಕ್ಕೆ ಹೊಸ ಶಕ್ತಿ ತುಂಬಿದ್ದಾರೆ. ಹೊನ್ನಾವರದ ಸಂಘಕ್ಕೆ ಜಿಲ್ಲಾ ಸಂಘದ ಸಂಪೂರ್ಣ ಬೆಂಬಲವಿದೆ ಎಂದು ಕಾರವಾರ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಆನಂದು ಗಾಂವಕರ್ ನುಡಿದರು. ಅವರು ಹೊನ್ನಾವರ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಎನ್.ಇ.ಎಸ್ ಹೊನ್ನಾವರದಲ್ಲಿ ಆಯೋಜಿಸಿದ ಸರ್ವಸದಸ್ಯರ ಸಭೆ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಹೊನ್ನಾವರ ತಾಲೂಕಾ ಶಿಕ್ಷಕ ಸಂಘವು ತಾಲೂಕಾ ಶಿಕ್ಷಕರ ಪರವಾಗಿ ಅಭಿಮಾನ ಪೂರ್ವಕವಾಗಿ ಜಿಲ್ಲಾಧ್ಯಕ್ಷರಾದ ಆನಂದು ಗಾಂವಕರವರನ್ನು ಸನ್ಮಾನಿಸಿದರು.
ವೇದಿಕೆಯಲ್ಲಿದ್ದ ಜಿಲ್ಲಾ ಉಪಾಧ್ಯಕ್ಷರಾದ ಸಾಧನಾ ಬರ್ಗಿ ತಾಲೂಕಾ ಉಪಾಧ್ಯಕ್ಷರಾದ ಸುರೇಶ ನಾಯ್ಕ ಮಾತನಾಡಿದರು. ನಂತರ ಶಿಕ್ಷಕರಿಂದ ಸಂವಾದ ಕಾರ್ಯಕ್ರಮ ನಡೆಯಿತು. ಅನೇಕ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಹಂಚಿಕೊAಡರು. ಮತ್ತು ಸಂಘ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಬಗ್ಗೆ ಸೂಕ್ತ ಸಲಹೆ, ಮಾರ್ಗದರ್ಶನ ನೀಡಿದರು. ಸಭಾ ಅಧ್ಯಕ್ಷತೆಯನ್ನು ವಹಿಸಿದ್ದ ತಾಲೂಕಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಮ್.ಜಿ.ನಾಯ್ಕರವರು ಶಿಕ್ಷಕರ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವುದರ ಜೊತೆಗೆ ಮುಂದಿನ ದಿನಗಳಲ್ಲಿ ಜಿಲ್ಲಾ ಸಂಘದ ಸಹಕಾರದೊಂದಿಗೆ ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಮೂಲಕ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ನಿಮ್ಮೆಲ್ಲರ ನಿರೀಕ್ಷೆಯಂತೆ ತಾಲೂಕಾ ಸಂಘವು ಕಾರ್ಯನಿರ್ವಹಿಸಲಿದೆ ಎಂದರು. ಈ ಸಂದರ್ಭದಲ್ಲಿ ತಾಲೂಕಾ ವೇದಿಕೆಯಲ್ಲಿ ಶಿಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ