April 26, 2024

Bhavana Tv

Its Your Channel

ಅಪ್ರಾಪ್ತ ಯುವತಿಯ ಅಪಹರಣ ಪ್ರಕರಣಕ್ಕೆ ಸಂಬOಧ ಪಟ್ಟಂತೆ ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿ ಕರೆತರುವಲ್ಲಿ ಯಶಸ್ವೀ

ಅಪಹರಣ ಮಾಡಿದ ಯುವಕ ಪೊಲೀಸರಿಂದ ತಪ್ಪಿಸಿಕೊಂಡಿದ್ದು ಆತನ ಬಂಧನಕ್ಕೆ ಗ್ರಾಮೀಣ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಎಪ್ರಿಲ್ ೮ರಂದು ೧೫ ವರ್ಷದ ಬಾಲಕಿ ಶಾಲೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದವಳು ಮರಳಿ ಮನೆಗೆ ಬಾರದೇ ಇರುವುದರಿಂದ ಗಾಬರಿಗೊಂಡ ಪೊಷಕರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ತನಿಖೆಯನ್ನು ಕೈಗೊಂಡ ಪೊಲೀಸರಿಗೆ ಯುವತಿಯು ಬೆಂಗಳೂರಿನ ನೆಲಮಂಗಲದಲ್ಲಿ ಇರುವ ಕುರಿತು ಮಾಹಿತಿ ದೊರೆತಿತ್ತು. ತಕ್ಷಣ ಕಾರ್ಯ ಪ್ರವೃತ್ತಾದ ಪೊಲೀಸರು ನೆಲಮಂಗಲಕ್ಕೆ ತೆರಳಿ ಯುವತಿಯನ್ನು ಪತ್ತೆ ಹಚ್ಚಿ ಕರೆದುಕೊಂಡು ಬಂದಿದ್ದಾರೆ. ಯುವತಿಯನ್ನು ಚಿತ್ರಾಪುರದ ಅಕ್ಷತ್ ನಾಯ್ಕ ಎನ್ನುವವನು ಪುಸಲಾಯಿಸಿ ಅಪಹರಣ ಮಾಡಿಕೊಂಡು ಹೋಗಿರುವ ಕುರಿತು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು ಯುವಕನ ಬಂಧನವಾದ ನಂತರವಷ್ಟೇ ಇನ್ನಷ್ಟು ವಿವರಗಳು ತಿಳಿದು ಬರಬೇಕಿದೆ. ಯುವತಿಯನ್ನು ಕರೆದುಕೊಂಡು ಬಂದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಗ್ರಾಮೀಣ ಠಾಣೆಯ ಪೊಲೀಸಲು ತನಿಖೆ ಕೈಗೊಂಡಿದ್ದಾ

error: