ಹೊನ್ನಾವರ : ಡಾ|| ಬಾಬಾ ಸಾಹೇಬ ಅಂಬೇಡ್ಕರ್ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು ಡಾ|| ಅಂಬೇಡ್ಕರ್ರವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಅಭಿಪ್ರಾಯ ಪಟ್ಟರು.
ಅವರು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಏರ್ಪಡಿಸಿದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅಂಬೇಡ್ಕರ್ ಅವರ ೧೩೦ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಭಾರತದಂತಹ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟçದಲ್ಲಿ ಸಾವಿರಾರು ಜಾತಿ, ಹತ್ತಾರು ಧರ್ಮಗಳು, ಅನೇಕ ಭಾಷೆಗಳ ನಡುವೆಯೂ ನಾವು ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಶಾಂತಿ ಮತ್ತು ಸ್ನೇಹದಿಂದ ಬದುಕುತ್ತಿದ್ದರೆ ಅದು ಡಾ|| ಬಾಬಾ ಸಾಹೇಬ ಅಂಬೇಡ್ಕರ್ರವರು ಭಾರತಕ್ಕೆ ನೀಡಿದ ಸಂವಿಧಾನದ ಮೂಲಕ ಎನ್ನುವುದಕ್ಕೆ ತುಂಬಾ ಹೆಮ್ಮೆ ಎನಿಸುತ್ತದೆ ಎಂದರು. ಇಂತಹ ಮಹಾನ್ ಚಿಂತಕನ ತತ್ವ, ಆದರ್ಶಗಳು ಈ ಜಗತ್ತಿನಲ್ಲಿ ಸೂರ್ಯ, ಚಂದ್ರನಿರುವವರೆಗೂ ಶಾಶ್ವತವಾಗಿರಲಿ ಎಂದು ಹಾರೈಸಿ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲ ಉದ್ದೇಶವನ್ನು ಇಂದಿನ ಯುವಕರು, ವಿದ್ಯಾರ್ಥಿಗಳು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳುವಂv ಜಗದೀಪ ಎನ್. ತೆಂಗೇರಿ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸೇರಿದ ಪಕ್ಷದ ಎಲ್ಲಾ ಕಾರ್ಯಕರ್ತರು ಡಾ|| ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಭೆಯಲ್ಲಿ ಕಾಂಗ್ರೇಸ್ ಇಂಟಕ ಅಧ್ಯಕ್ಷ ಆಗ್ನೆಲ್ ಡಯಾಸ, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಝಕ್ರಿಯ್ಯಾ ಸಾಬ್, ಮಾದೇವ ನಾಯ್ಕ, ಕರ್ಕಿ, ಸಾಲ್ವೋದರ ಡಿ’ಸೋಜಾ, ಬ್ರಾಜಿಲ್ ಪಿಂಟೊ, ಚಂದ್ರಶೇಖರ ಚಾರೋಡಿ, ಉದಯ ಮೇಸ್ತ, ನೆಲ್ಸನ್ ರೊಡ್ರಿಗಿಸ್, ಜೋಸೆಪ್ ಡಿಸೋಜಾ, ಹನಿಫ್ ಶೇಖ, ಮೋಹನ ಮೇಸ್ತ, ಸುರೇಶ ಮೇಸ್ತ, ಮಂಜುನಾಥ ಖಾರ್ವಿ, ಗಜು ನಾಯ್ಕ, ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಕೃಷ್ಣ ಹರಿಜನ ಇನ್ನೂ ಮುಂತಾದ ಮುಖಂಡರು ಉಪಸ್ಥಿತರಿದ್ದರು.
More Stories
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ
ಮುಂಡಗೋಡ ತಾಲೂಕಿನಲ್ಲಿ ನಡೆದ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನ