April 19, 2024

Bhavana Tv

Its Your Channel

ಕಾರು ಡಿಕ್ಕಿ ಕೂಲಿ ಕಾರ್ಮಿಕ ಸಾವು

ಕೂಲಿ ಕಾರ್ಮಿಕನೊರ್ವ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುರುಡೇಶ್ವರ ರೈಲ್ ಸ್ಟೇಶನ್ ಎದುರಿನ ರಾಷ್ಟಿಯ ಹೆದ್ದಾರಿಯಲ್ಲಿ ನಡೆದಿದೆ

ಭಟ್ಕಳ: ಮೃತ ಕೂಲಿ ಕಾರ್ಮಿಕ ಸೈಯದ್ ಮುಜೀಬ್ ಬೆಂಗಳೂರಿನ ಯಲಹಂಕ ನಿವಾಸಿ ಎಂದು ತಿಳಿದು ಬಂದಿದೆ. ಕಾರವಾರ ದಿಂದ ಬೈಂದೂರು ಕಡೆ ಹೋಗುತ್ತಿದ್ದ ಕಾರೊಂದು ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕನಿಗೆ ಬಡಿದ ಪರಿಣಾಮ ಸ್ಥಳದಲ್ಲೇ ಮೃತ ಪಟ್ಟಿದ್ದು. ಈತ ರೈಲ್ವೆ ಕೂಲಿ ಕೆಲಸದ ನಿಮಿತ್ತ ಮುರುಡೇಶ್ವರಕ್ಕೆ ಬಂದಿದ್ದ ಎನ್ನಲಾಗಿದೆ.
ಈ ಬಗ್ಗೆ ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: