ಭಟ್ಕಳ ; ತಾಲೂಕಿನ ಕೋಣಾರ ಗ್ರಾಮ ಪಂಚಾಯತ ವ್ಯಾಪ್ತಿಯ ಗುಂಡುಬೆಳ್ಳು ಎಂಬುವಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಣದ ಮೇಲೆ ದಾಳಿ ನಡೆಸಿ ಮೂವರನ್ನು ಬಂದಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳು ಅಣಪ್ಪ ಮಂಗಳ ಗೊಂಡ, ಮಂಗಳ ತಿಮ್ಮಪ್ಪ ಗೊಂಡ, ಸುರೇಶ ಮಂಗಳ ಗೊಂಡ ಎಂದು ತಿಳಿದು ಬಂದಿದೆ. ಇವರೆಲ್ಲ ಕೋಣಾರ ಗ್ರಾಮದ ಗುಂಡುಬೆಳ್ಳು ಊರಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಮ್ಮ ತಮ್ಮ ಲಾಭಗೊಸ್ಕರ ಕೋಳಿ ಹುಂಜಗಳ ಕಾಲಿಗೆ ಕತ್ತಿ ಕಟ್ಟಿ ಕಾದಾಟಕ್ಕೆ ಬಿಟ್ಟು ಅದರ ಮೇಲೆ ಹಣದ ಪಂಥವನ್ನು ಕಟ್ಟಿ ಜುಗಾರಾಟ ಓದುತ್ತಿದ್ದಾಗ ಒಟ್ಟು ೨೪೫೦ ನಗದು ಹಣ, ಒಂದು ಕೋಳಿ ಹುಂಜ, ಹಾಗೂ ಒಂದು ಕೋಳಿ ಕತ್ತಿ ಯೊಂದಿಗೆ ೩ ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ