ಭಟ್ಕಳ: ಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಉತ್ತರಕೊಪ್ಪ ಗ್ರಾಮ, ಅತ್ತಿಬಾರ ಹೆಗ್ಗದ್ಸೆಯಲ್ಲಿ ಗುರುವಾರ ಸಾಗುವಾನಿ ಮರದ ತುಂಡು ತುಂಬಿಕೊAಡು ಸಾಗಿಸುತ್ತಿದ್ದ ಸ್ಕಾರ್ಪಿಯೋ ವಾಹನವನ್ನು ಊರಿನವರು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಆರೋಪಿಗಳು ಅಂದಾಜು ೧೫ ಸಾವಿರ ಮೌಲ್ಯದ ಸಾಗುವಾನಿ ತುಂಡುಗಳನ್ನು ಕಾರಿನಲ್ಲಿ ಸಾಗಿಸುವಾಗ ಕಾರ್ ಪಂಕ್ಚರ್ ಅದ ಕಾರಣ ಅಲ್ಲೆ ಬಿಟ್ಟು ಹೋಗಿದ್ದರು. ಸಾರ್ವಜನಿಕರು ನಿಂತ ವಾಹನವನ್ನು ಪರಿಶೀಲಿಸಿದಾಗ ಅಕ್ರಮವಾಗಿ ಸಾಗುವಾನಿ ಸಾಗಿಸುತ್ತಿದ್ದುದು ಬೆಳಕಿಗೆ ಬಂದಿದೆ. ಬಳಿಕ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.ವಾಹನ ಮತ್ತು ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಸಾಗುವಾನಿ ತುಂಡುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸುದರ್ಶನ್ ಆರ್. ಕೆ. ಹಾಗೂ ವಲಯ ಅರಣ್ಯಾಧಿಕಾರಿ ಸವಿತಾ ಆರ್, ದೇವಾಡಿಗ, ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಸವಿತಾ ದೇವಾಡಿಗ ಅವರ ನಿರ್ದೇಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಜಗದೀಶ ನಾಯ್ಕ, ಮಧುಕುಮಾರ ನಾಯ್ಕ, ಅರಣ್ಯ ರಕ್ಷಕ ಕಾಡಪ್ಪ, ಚಾಲಕ ಜೈದೀಪ ಶೇಟ್ ವಾಹನವನ್ನು ಅರಣ್ಯ ಇಲಾಖೆಗೆ ತೆಗೆದುಕೊಂಡು ಬಂದು ಪ್ರಕರಣ ದಾಖಲಿಸಿದ್ದಾರೆ.
More Stories
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ
ಮುಂಡಗೋಡ ತಾಲೂಕಿನಲ್ಲಿ ನಡೆದ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನ